ಶಸ್ತ್ರಾಸ್ತ್ರಗಳಿಗೆ ಯಧುವೀರ್ ಪೂಜೆ 
ರಾಜ್ಯ

ನಾಡಿನಾದ್ಯಂತ ಸಡಗರ,ಸಂಭ್ರಮದಿಂದ ಆಯುಧ ಪೂಜೆ ಆಚರಣೆ

:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ

ಬೆಂಗಳೂರು:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಮೈಸೂರಿನ ಅರಮನೆ ಮೈದಾನದೊಳದೆ ರಾಜಮನೆತನದಿಂದ ಆಯಧ ಪೂಜೆಯನ್ನು ಆಚರಿಸಲಾಗುತ್ತಿದೆ. 

ಆಯುಧ ಪೂಜೆಗೆ ಐತಿಹಾಸಿಕ ದಂತಕಥೆವಿದೆ. ದುರ್ಗಾ ದೇವಿಯು ಚಾಮುಂಡೇಶ್ವರಿಯ ರೂಪ ತಾಳಿ ಮಹಿಷಾಸುರನನ್ನು ಸಂಹರಿಸಿದ ಸಂದರ್ಭದಲ್ಲಿ ದೇವಿ ಉಪಯೋಗಿಸಿದ ಆಯುಧಗಳನ್ನು ಮತ್ತೆ ಬಳಸದೆ ಬಿಸಾಡಿದಳು. ಆ ಆಯುಧಗಳನ್ನು ನಂತರ ಪೂಜೆಸಲಾಯಿತು. ಹಾಗಾಗಿಯೇ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ ಎಂಬ ಕಥೆ ಪುರಾಣಗಳಲ್ಲಿ ಉಲ್ಲೇಖವಾಗಿದೆ. 

ಆಯುಧ ಪೂಜೆಯ ಹಿಂದೆ ಪೌರಾಣಿಕ ಮಹತ್ವವಿದೆ. ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ, ಅಜ್ಞಾತವಾಸದ ಸಮಯದಲ್ಲಿ ಬನ್ನಿಗಿಡದಲ್ಲಿ ಬಚ್ಚಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನೆಲ್ಲ ತೆಗೆದು  ಶತ್ರುಗಳ ವಿರುದ್ಧ ಪಾಂಡವರು ವಿಜಯವನ್ನು ಸಾಧಿಸುತ್ತಾರೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಸಾಧಿಸಿದ ವಿಜಯದ ಕುರುಹಾಗಿ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT