ಸಂಗ್ರಹ ಚಿತ್ರ 
ರಾಜ್ಯ

ದಸರಾ ಸಂಭ್ರಮ ಸಾವಿನಲ್ಲಿ ಅಂತ್ಯ! ಚಿಕ್ಕಮಗಳೂರಿನಲ್ಲಿ ಮೂವರು ಬಾಲಕರು ನೀರುಪಾಲು

ಆಯುಧ ಪೂಜೆಯಂದು ಕೆರೆಯಲ್ಲಿ ಸೈಕಲ್ ತೊಳೆದು ಈಜಲು ತೆರಳಿದಾಗ ಮೂವರು ಬಾಲಕರು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಯುಧ ಪೂಜೆಯಂದು ಕೆರೆಯಲ್ಲಿ ಸೈಕಲ್ ತೊಳೆದು ಈಜಲು ತೆರಳಿದಾಗ ಮೂವರು ಬಾಲಕರು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲಳ್ಳಿ ಗ್ರಾಮದ ಕಂಚಿಕಟ್ಟೆಯಲ್ಲಿ ನಡೆದ ದುರ್ಘಟನೆ ಇದಾಗಿದ್ದು ಮುರುಳಿ‌ (15), ಜೀವಿತ್ (14) ಹಾಗೂ ಚಿರಾಗ್ (15) ಎಂಬ ಮೂವರು ಬಾಲಕರು ದುರ್ಮರಣಕ್ಕೀಡಾಗಿದ್ದಾರೆ.

ಇವರಲ್ಲಿ ಮುರುಳಿ ಹಾಗೂ ಜೀವಿತ್ ಮೃತದೇಹವು ಪತ್ತೆಯಾಗಿದ್ದು ಚಿರಾಗ್ ಶವಕ್ಕಾಗಿ ಪೋಲೀಸರು, ಅಗ್ನಿಶಾಮಕ ಸಿಬ್ಬಂದಿ ಹುಡುಕಾಟದಲ್ಲಿದ್ದಾರೆ.

ಮೃತಪಟ್ಟ ಮೂವರು ಬಾಲಕರು ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ನಿವಾಸಿಗಳೆನ್ನಲಾಗಿದೆ. ನಿನ್ನೆ ಸಂಜೆ ಆಯುಧ ಪೂಜೆ ನಿಮಿತ್ತ ಸೈಕಲ್ ಪೂಜೆ ನಡೆಸಿ ಬಳಿಕ ಈಜಲು ಕೆರೆಗಿಳಿದಾಗ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT