ರಮೇಶ್ ಕುಮಾರ್ 
ರಾಜ್ಯ

ಮಡಿವಂತಿಕೆ ಅಲ್ಲದ ಜನಪರ ಆರ್ಥಿಕತೆ ಬೇಕಾಗಿದೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ 

ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ. 

ಬೆಂಗಳೂರು: ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ. 

'ಪವಿತ್ರ ಆರ್ಥಿಕತೆಗಾಗಿ' ಪ್ರಸನ್ನ ಅವರು ಕೈಗೊಂಡ  ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಆರ್ಥಿಕ ಕ್ಷೇತ್ರದಲ್ಲಿ ಪಾವಿತ್ರ್ಯತೆ ಬೇಕು. ಹಾಗಂತ ಅದು ಮತ್ತೆ ಮಡಿವಂತಿಕೆ ಆಗಬಾರದು, ಜನಪರ ಆರ್ಥಿಕತೆ ಆಗಬೇಕಾಗಿದೆ. ಉತ್ಪಾದಕರು ಮತ್ತು ಬಳಕೆದಾರರ ನಡುವಿನ ಅಂತರ ಕಡಿಮೆ ಆಗಬೇಕು. ಮಧ್ಯವರ್ತಿಗಳ ಹಾವಳಿ ಇಲ್ಲದ ಹಾಗೇ ಇದನ್ನು ಮೇಲೆತ್ತಬೇಕು. ತಾವಂತೂ ಈ ಚಳವಳಿಗೆ ಕಾಯಾ ವಾಚಾ ಮನಸಾ ಜೊತೆಗಿದ್ದೇನೆ ಎಂದರು.

ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಗೋಪಾಲ ಗೌಡ ಮಾತನಾಡಿ, 'ಮಾನವಹಕ್ಕುಗಳು ಮತ್ತು ಮನುಷ್ಯರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಎರಡೂ ಸರಕಾರಗಳು ಸೋತಿವೆ. ಬಡತನ, ನಿರುದ್ಯೋಗ, ಅನಾರೋಗ್ಯ, ಪರಿಸರ ಹಾನಿ, ಸಂಪೂರ್ಣ ಕೆಳಗಿಳಿದ ದೇಶದ ಜಿಡಿಪಿ, ರೈತರ ಸರಣಿ ಆತ್ಮಹತ್ಯೆಗಳು, ಪ್ರಕೃತಿ ವಿಕೋಪಕ್ಕೊಳಗಾದ ಜಿಲ್ಲೆ ಹಾಗೂ ಜನರಿಗೆ ಇನ್ನೂ ತಲುಪದ ಪರಿಹಾರ ದಾರಿಗಳು ಇದೆಲ್ಲವನ್ನು ಗಮನದಲ್ಲಿರಿಸಿಕೊಂಡು ಸರಕಾರಗಳು ಕಾರ್ಯನಿರ್ವಹಿಸಬೇಕು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT