ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರ 
ರಾಜ್ಯ

ಮೈಸೂರು ದಸರಾ 2019: ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಪ್ರಥಮ‌ ಬಹುಮಾನ

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ಮೈಸೂರು: ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಚಾಮರಾಜನಗರ ಜಿಲ್ಲೆಯ “ಸಂವೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ” ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಅಂತೆಯೇ ಉತ್ತರ ಕನ್ನಡ ಜಿಲ್ಲೆಯ “ಕದಂಬ/ಬನವಾಸಿ” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ದ್ವೀತಿಯ ಹಾಗೂ ತುಮಕೂರು ಜಿಲ್ಲೆಯ “ನಡೆದಾಡುವ ದೇವರು” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದೆ.

ಇನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಸರ್ಕಾರದ ಸೌಲಭ್ಯಗಳ ಮಾಹಿತಿ” ವಿಷಯ ಆಧಾರಿತ ಸ್ತಬ್ಧಚಿತ್ರ, ಶಿವಮೊಗ್ಗ ಜಿಲ್ಲೆಯ “ಫಿಟ್ ಇಂಡಿಯಾ” ಹಾಗೂ ಚಿಕ್ಕಮಗಳೂರು ಜಿಲ್ಲೆಯ “ಶಿಶಿಲ ಬೆಟ್ಟ” ವಿಷಯ ಆಧಾರಿತ ಸ್ತಬ್ಧಚಿತ್ರಗಳು ಸಮಾಧಾನಕರ ಬಹುಮಾನವನ್ನು ಹಂಚಿಕೊಂಡಿದೆ.  

ನಿನ್ನೆ ನಡೆದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ 30 ಜಿಲ್ಲೆಗಳ ಸ್ಥಬ್ಧಚಿತ್ರ ಸೇರಿದಂತೆ 38 ಸ್ತಬ್ಧ ಚಿತ್ರಗಳು ಭಾಗಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT