ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರ 
ರಾಜ್ಯ

ಮೈಸೂರು ದಸರಾ 2019: ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಪ್ರಥಮ‌ ಬಹುಮಾನ

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ಮೈಸೂರು: ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಚಾಮರಾಜನಗರ ಜಿಲ್ಲೆಯ “ಸಂವೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ” ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಅಂತೆಯೇ ಉತ್ತರ ಕನ್ನಡ ಜಿಲ್ಲೆಯ “ಕದಂಬ/ಬನವಾಸಿ” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ದ್ವೀತಿಯ ಹಾಗೂ ತುಮಕೂರು ಜಿಲ್ಲೆಯ “ನಡೆದಾಡುವ ದೇವರು” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದೆ.

ಇನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಸರ್ಕಾರದ ಸೌಲಭ್ಯಗಳ ಮಾಹಿತಿ” ವಿಷಯ ಆಧಾರಿತ ಸ್ತಬ್ಧಚಿತ್ರ, ಶಿವಮೊಗ್ಗ ಜಿಲ್ಲೆಯ “ಫಿಟ್ ಇಂಡಿಯಾ” ಹಾಗೂ ಚಿಕ್ಕಮಗಳೂರು ಜಿಲ್ಲೆಯ “ಶಿಶಿಲ ಬೆಟ್ಟ” ವಿಷಯ ಆಧಾರಿತ ಸ್ತಬ್ಧಚಿತ್ರಗಳು ಸಮಾಧಾನಕರ ಬಹುಮಾನವನ್ನು ಹಂಚಿಕೊಂಡಿದೆ.  

ನಿನ್ನೆ ನಡೆದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ 30 ಜಿಲ್ಲೆಗಳ ಸ್ಥಬ್ಧಚಿತ್ರ ಸೇರಿದಂತೆ 38 ಸ್ತಬ್ಧ ಚಿತ್ರಗಳು ಭಾಗಿಯಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT