ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಇಬ್ಬರು ಯುವಕರು ನೀರು ಪಾಲು

ದೇವಿಯ ಘಟಸ್ಥಾಪನೆ ವಿಸರ್ಜನೆಗೆ ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿಯ ಕೊಳ್ಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಕಲಬುರಗಿ: ದೇವಿಯ ಘಟಸ್ಥಾಪನೆ ವಿಸರ್ಜನೆಗೆ ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿಯ ಕೊಳ್ಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಅಕ್ಕಪಕ್ಕ ಮನೆಯ 19 ವರ್ಷದ ಗಣೇಶ್ ಮತ್ತು 18 ವರ್ಷದ ಗೋಪಾಲ್ ಮೃತ ದುರ್ದೈವಿಗಳು. 

ದಸರಾ ಹಬ್ಬದ ಪ್ರಯುಕ್ತ ಒಂಭತ್ತು ದಿನಗಳ ಕಾಲ ಸಸಿಗಳನ್ನು ಬೆಳೆಸಿ, ಇಂದು ವಿಸರ್ಜನೆ ಮಾಡಲು ಗ್ರಾಮದ ಹೊರವಲಯದ ಕೆರೆಗೆ ಗಣೇಶ್ ಮತ್ತು ಗೋಪಾಲ್ ತೆರಳಿದ್ದರು. ಈ ವೇಳೆ ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸಸಿ ವಿಸರ್ಜಿಸಲು ಹೋದ ಯುವಕರು ತುಂಬಾ ಹೊತ್ತಾದರೂ ಮನೆಗೆ ಮರಳದಿದ್ದಕ್ಕೆ, ಆತಂಕಗೊಂಡ ಪೋಷಕರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಅವರಿಬ್ಬರೂ ಕಾಣಿಸದಿದ್ದಾಗ, ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಗಣೇಶ್ ಮತ್ತು ಗೋಪಾಲ ಅವರ ಮೃತದೇಹಗಳು ಪತ್ತೆಯಾಗಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT