ಸಂಗ್ರಹ ಚಿತ್ರ 
ರಾಜ್ಯ

ಮುದ್ರಾಂಕ ಮತ್ತು ನೋಂದಣಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನೂರಾರು ಕೋಟಿ ಆದಾಯ ಖೋತ!

ರಾಜ್ಯ ಸರ್ಕಾರದ ಪ್ರಮುಖ ಆದಾಯ ಮೂಲಗಳಾದ ವಾಣಿಜ್ಯ ತೆರಿಗೆಗಳ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಡಿ 2017-18ನೇ ಸಾಲಿನಲ್ಲಿ ರಾಜಸ್ವಕ್ಕೆ ಸಂಬಂಧಪಟ್ಟಂತೆ ಮಹಾಲೇಖಪಾಲರ ವರದಿ ಗುರುವಾರ ಮಂಡನೆಯಾಗಿದ್ದು, ನೂರಾರು ಕೋಟಿ ರೂ. ಆದಾಯ ಖೋತಾ ಆಗಿರುವುದು ವರದಿಯಲ್ಲಿ ಬಯಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಆದಾಯ ಮೂಲಗಳಾದ ವಾಣಿಜ್ಯ ತೆರಿಗೆಗಳ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಡಿ 2017-18ನೇ ಸಾಲಿನಲ್ಲಿ ರಾಜಸ್ವಕ್ಕೆ ಸಂಬಂಧಪಟ್ಟಂತೆ ಮಹಾಲೇಖಪಾಲರ ವರದಿ ಗುರುವಾರ ಮಂಡನೆಯಾಗಿದ್ದು, ನೂರಾರು ಕೋಟಿ ರೂ. ಆದಾಯ ಖೋತಾ ಆಗಿರುವುದು ವರದಿಯಲ್ಲಿ ಬಯಲಾಗಿದೆ.

ಪ್ರಮುಖವಾಗಿ ಮದ್ಯ ಮಾರಾಟದ ಮೇಲೆ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿರು ವುದು.ಲೆಕ್ಕ ಪರಿಶೋಧನೆಗೆ ಒಳಪಟ್ಟ ಲೆಕ್ಕಪತ್ರಗಳಲ್ಲಿ ಘೋಷಿಸಲಾಗಿದ್ದ ವ್ಯತ್ಯಾಸದ ತೆರಿಗೆ ಪಾವತಿಸದಿರುವುದು. ಕಾಮಗಾರಿ ಗುತ್ತಿಗೆದಾರರಿಗೆ ಸಂಬಂಧಿಸಿದಂತೆ ತೆರಿಗೆ ಕಡಿಮೆ ಪ್ರಮಾಣದಲ್ಲಿ ವಿಧಿಸಿರುವುದು. ಖರೀದಿಗಳ ಮೇಲಿನ ತೆರಿಗೆ ಜಮೆಯ ರೂಪದಲ್ಲಿ ಆದಾಯ ನಷ್ಟವಾಗಿರುವ ಬಗ್ಗೆ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

ಈ ನಡುವೆ ಲೆಕ್ಕಪರಿಶೋಧನೆಗೆ ಕಡತಗಳನ್ನು ಸಲ್ಲಿಸದಿರುವುದನ್ನೂ ವರದಿಯಲ್ಲಿ ಉಲ್ಲೇಖಿ ಸಲಾಗಿದೆ. 2017-18ನೇ ಸಾಲಿನಲ್ಲಿ ಹಣಕಾಸು, ಕಂದಾಯ, ಸಾರಿಗೆ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಇಂಧನ ಇಲಾಖೆಗಳ 386 ಕಚೇರಿಗಳ ಪೈಕಿ ಹಣಕಾಸು,ಕಂದಾಯ ಇಲಾಖೆ ಅಡಿಯ ಲ್ಲಿ ಹಲವು ಕಚೇರಿಗಳಲ್ಲಿ ಲೆಕ್ಕ ಪರಿಶೋಧನೆಗಾಗಿ 35 ದಾಖಲೆ ಒದಗಿಸಿಲ್ಲ. ಇದರಿಂದಾಗಿ ಕರ ನಿರ್ಧಾರಣೆ ಹಾಗೂ ವಿಧಿಸಲಾದಂತಹ ತೆರಿಗೆಗಳು ಅಥವಾ ವಸೂಲಾತಿ ಸಂಗ್ರಹವಾದಂತಹ ವರಮಾನದ ಬಗ್ಗೆ ಖಚಿತತೆ ಪಡೆಯಲಾಗಿಲ್ಲ ಎಂದು ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT