ಭೈರತಿ ಬಸವರಾಜ್ 
ರಾಜ್ಯ

ಉಪಚುನಾವಣೆ ಹಿನ್ನೆಲೆ: ವಿಜಯದಶಮಿ ನೆಪದಲ್ಲಿ ಮತದಾರರಿಗೆ ಬೈರತಿ ಬಸವರಾಜ್ ಬಾಡೂಟ

ವಿಜಯ ದಶಮಿ ಅಂಗವಾಗಿ ಅನರ್ಹಗೊಂಡ ಶಾಸಕ ಬೈರತಿ ಬಸವರಾಜ್​ ತಮ್ಮ ಕ್ಷೇತ್ರದ ಮತದಾರರಿಗೆ ಬುಧವಾರ ಭರ್ಜರಿ ಬಾಡೂಟ ಆಯೋಜಿಸಿದ್ದರು.

ಬೆಂಗಳೂರು: ವಿಜಯ ದಶಮಿ ಅಂಗವಾಗಿ ಅನರ್ಹಗೊಂಡ ಶಾಸಕ ಬೈರತಿ ಬಸವರಾಜ್​ ತಮ್ಮ ಕ್ಷೇತ್ರದ ಮತದಾರರಿಗೆ ಬುಧವಾರ ಭರ್ಜರಿ ಬಾಡೂಟ ಆಯೋಜಿಸಿದ್ದರು.

ಕಣ್ಣೂರು ಸಮೀಪದ ತಮ್ಮದೇ ಬಡಾವಣೆಯಾದ ಕನಕಶ್ರೀ ಬಡಾವಣೆಯಲ್ಲಿ ಎಕರೆ ಗಟ್ಟಲೆ ಪೆಂಡಾಲ್ ಹಾಕಿಸಿ, ಐವತ್ತು ಸಾವಿರಕ್ಕೂ ಅಧಿಕ ಮಂದಿಗೆ ಮಾಂಸಾಹಾರ ಭಕ್ಷ್ಯಗಳನ್ನು ಸಿದ್ಧಪಡಿಸಿ ಉಣಬಡಿಸಿದ್ದಾರೆ.

ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಯನ್ನು ಸೆಳೆಯಲು ಬಾಡೂಟ ಹಾಕಿಸಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. 

ಪಕ್ಷದ ವಿರೋಧಿ ಚಟುವಟಿಕೆಯಲ್ಲಿ ಬೈರತಿ ಬಸವರಾಜ್​ ಕಾಂಗ್ರೆಸ್​ನಿಂದ ಉಚ್ಛಾಟನೆಗೊಂಡಿದ್ದು, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಈಗಿನಿಂದಲೇ ಚುನಾವಣೆ ತಯಾರಿ ಕೈಗೊಂಡಿದ್ದಾರೆ ಎನ್ನಲಾಗಿದೆ

ಡಿಸೆಂಬರ್‌ನಲ್ಲಿ ಉಪಚುನಾವಣೆ ನಿಗದಿಯಾಗಿದೆ, ಇದೇ ಸಂದರ್ಭಗಳಲ್ಲಿ ಕೆಆರ್‌ ಪುರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹಾಗೂ ಮತ್ತು ಮತದಾರರಿಗೆ ಭೋಜನ ವ್ಯವಸ್ಥೆ ಮಾಡಿದ್ದರು.

ಬಾಡೂಟ ಕಾರ್ಯಕ್ರಮದಲ್ಲಿ ಬಿರಿಯಾನಿ, ನಾಟಿಕೋಳಿ ಸಾರು, ಮೀನು ಫ್ರೈ, ಕಬಾಬ್ ಮೊಟ್ಟೆ ಸೇರಿದಂತೆ ಹಲವು ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು. ಇದಕ್ಕಾಗಿ 2ಟನ್ ಮಟನ್, ಮೂರುವರೆ ಟನ್ ಚಿಕನ್, 500 ಕೆಜಿ ಮೀನು ಮತ್ತು 2 ಲಕ್ಷ ಮೊಟ್ಟೆಗಳನ್ನು ಬಳಸಲಾಗಿತ್ತು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ