ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.

ಕಲಾಪ ದೃಶ್ಯ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ಸುದ್ದಿಗಾರರಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸ್ಪೀಕರ್, ಇಂದಿನಿಂದ ಅಧಿವೇಶನ ಆರಂಭವಾಗುತ್ತಿದ್ದು, ರಾಜ್ಯದ ಅಭಿವೃದ್ಧಿ ಬೆಳವಣಿಗೆಗೆ ಸದನದಲ್ಲಿ ಚರ್ಚೆ ಆಗಬೇಕು ಎನ್ನುವ ಅಪೇಕ್ಷೆಯಿದೆ. ಯಾವುದನ್ನು ನಾವು ಮುಚ್ಚಿಡುವುದಿಲ್ಲ‌. ಈ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚರ್ಚೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ಇರಲಿದೆ. ಬಳಿಕ ಇದನ್ನು ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚಚರ್ಚಿಸಲಾಗುವುದು.ಈ ಮೂರು ದಿನಗಳಲ್ಲಿ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ: ಮಾರ್ಚ್ 28 ರಂದು RCB vs SRH

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

SCROLL FOR NEXT