ಸದಾನಂದ ಗೌಡ 
ರಾಜ್ಯ

ಡಿವಿಎಸ್ ಭರವಸೆ: ಪ್ರಸನ್ನ ಉಪವಾಸ ಇಂದಿಗೆ ಮುಕ್ತಾಯ

ಪರಿಸರ ಸಂರಕ್ಷಣೆ, ಕಾರ್ಮಿಕ ಸ್ನೇಹಿ ನೀತಿ ಜಾರಿ, ಶೂನ್ಯ ತೆರಿಗೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು 6ನೇ ದಿನವಾದ ಶುಕ್ರವಾರ ಕೊನೆಗೊಳಿಸಲಿದ್ದಾರೆ. 

ಬೆಂಗಳೂರು: ಪರಿಸರ ಸಂರಕ್ಷಣೆ, ಕಾರ್ಮಿಕ ಸ್ನೇಹಿ ನೀತಿ ಜಾರಿ, ಶೂನ್ಯ ತೆರಿಗೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು 6ನೇ ದಿನವಾದ ಶುಕ್ರವಾರ ಕೊನೆಗೊಳಿಸಲಿದ್ದಾರೆ. 

ಸತತ 5 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿರುವ ಪ್ರಸನ್ನ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸತ್ಯಾಗ್ರಹದ ಕಾರಣವಾದ ವಿಚಾರದ ಬಗ್ಗೆ ಕೇಂದ್ರ ಸರ್ಕಾರದೊಂದಿದೆ ಚರ್ಚಿಸುವ ವೇದಿಕೆಯನ್ನು 1 ತಿಂಗಳೊಳಗೆ ಸಿದ್ದಪಡಿಸುವ ಭರವಸೆ ನೀಡಿದರು. ಈ ವೇಳೆ ಉಪವಾಸ ಕೊನೆಗೊಳಿಸುವಂತೆ ಮನವಿ ಮಾಡಿಕೊಂಡರು. 

ಇದಕ್ಕೆ ಪ್ರಸನ್ನ ಅವರು, ನಮಗೆ ಕೇಂದ್ರದೊಂದಿಗೆ ಚರ್ಚೆಗೆ ವೇದಿಕೆ ಸಿದ್ಧಮಾಡಿಕೊಟ್ಟರೆ ಸಾಕು. ಆದರೆ, ಈ ಕೂಡಲೇ ಉಪವಾಸ ಕೈಬಿಡಲು ಸಾಧ್ಯವಿಲ್ಲ. ಶುಕ್ರವಾರ ಸಂಜೆ 5 ಗಂಟೆಗೆ ಜಯಪ್ರಕಾಶ ನಾರಾಯಣ ಜನ್ಮದಿನಗ ಅಂಗವಾಗಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಅದರಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಉಪವಾಸ ಕೈಬಿಡುವುದಾಗಿ ಘೋಷಣೆ ಮಾಡಿದರು. 

ಈ ನಡುವೆ 5 ದಿನಗಳಿಂದ ಸತ್ಯಾಗ್ರಹ ಕೈಗೊಂಡಿರುವ ಪ್ರಸನ್ನ ಅವರ ಆರೋಗ್ಯದ ಮೇಲೆ ಉಪವಾಸದ ಪರಿಣಾಮ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಅನ್ನ-ಆಹಾರ ತ್ಯಜಿಸಿರುವುದರಿಂದ ದೇಹ ನಿಶಕ್ತಿಗೊಂಡಿದೆ. ಉಪವಾಸ ಸತ್ಯಾಗ್ರಹ ಹಿನ್ನಲೆಯಲ್ಲಿ ರಾಜಕಾರಣಿಗಳು, ರಂಗಕರ್ಣಿಗಳು, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಗುರುವಾರವೂ ಪ್ರಸನ್ನ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚಿಸಿದರು. ಅದರಂತೆ ಬೆಳಿಗ್ಗೆ ಉಪ ಮುಖ್ಯಮಂತ್ರಿ ಸಿ.ಅಶ್ವತ್ಥ ನಾರಾಯಣ ಅವರು ಉಪವಾಸ ಸ್ಥಳಕ್ಕೆ ಭೇಟಿ ನೀಡಿ ಪ್ರಸನ್ನ ಅವರ ಆರೋಗ್ಯ ವಿಚಾರಿಸಿ, ಬೇಡಿಕೆಗಳ ಬಗ್ಗೆ ತಿಳಿದುಕೊಂಡರು. ನಂತರ ಉಪವಾಸ ಕೈ ಬಿಡುವಂತೆ ಪ್ರಸನ್ನ ಅವರಿಗೆ ಮನವಿ ಮಾಡಿದರು. 

ತಮ್ಮ ಆಗ್ರಹಗಳನ್ನು ಮುಂದಿಡಲು ವೇದಿಕೆ ಬೇಕೆಂದು ಕೇಳಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದೇನೆ. ಇನ್ನೊಂದು ತಿಂಗಳಲ್ಲಿ ಸಭೆ ನಡೆಯಲಿದೆ. ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದೇನೆ. ಶುಕ್ರವಾರ ಉಪವಾಸ ಕೈಬಿಡುವುದಾಗಿ ತಿಳಿಸಿದ್ದಾರೆಂದು ಸದಾನಂದ ಗೌಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT