ಯಡಿಯೂರಪ್ಪ 
ರಾಜ್ಯ

ನೆರೆ ಸಂತ್ರಸ್ಥರ ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಉಂಟಾದ ಅತಿವೃಷ್ಠಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು. ರೈತರ ಮತ್ತು ಜನಸಾಮಾನ್ಯರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಪ್ರಕಟಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಉಂಟಾದ ಅತಿವೃಷ್ಠಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು. ರೈತರ ಮತ್ತು ಜನಸಾಮಾನ್ಯರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಪ್ರಕಟಿಸಿದ್ದಾರೆ.

ಅತಿವೃಷ್ಠಿ ಮತ್ತು ಅನಾವೃಷ್ಠಿ ಕುರಿತಂತೆ ಸಾರ್ವಜನಿಕ ಮಹತ್ವದ ವಿಷಯ ಕುರಿತು ನೆಡೆದ ಚೆರ್ಚೆಗೆ ಉತ್ತರಿಸಿದ ಸಿಎಂ, ರೈತರು ಹಾಗೂ ಜನರ ಹಿತ ಕಾಪಾಡಲು ಸರ್ಕಾರ ಮುಂದಾಗಿದ್ದು, ವಾಸ ಮಾಡಲು ಆಗದೆ ಇರುವ ಎ ಮತ್ತು ಬಿ ವರ್ಗದ 42,893 ಮನೆಗಳಿಗೆ ತಲಾ 5 ಲಕ್ಷ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಸಿ ವರ್ಗದ 77,513 ಮನೆಗಳಿಗೆ 25 ಸಾವಿರ ರೂ. ಬದಲು 50 ಸಾವಿರ ರೂ. ಪರಿಹಾರ ನೀಡುವುದಾಗಿ ಅವರು ಪ್ರಕಟಿಸಿದರು.

ಬೆಳೆಹಾನಿಗೆ ಖುಷ್ಕಿ ಪ್ರತಿ ಹಕ್ಟೇರಿಗೆ 6800 ರೂ. ಜೊತೆಗೆ 10 ಸಾವಿರ ರೂ. ಸೇರಿ 16800 ರೂ. ನೀಡಲಾಗುವುದು. ನೀರಾವರಿ ಪ್ರದೇಶಕ್ಕೆ 13500ರೂ ಜೊತಗೆ ಹೆಚ್ಚುವರಿ 10 ಸಾವಿರ ರೂ ಹಾಗೂ ಶಾಶ್ವತ ನೀರಾವರಿಯ ಯೋಜನೆಗೆ ಪ್ರತಿ ಹೆಕ್ಟೇರ್ ಗೆ 18 ಸಾವಿರ ರೂ ಜೊತೆಗೆ ಹೆಚ್ಚುವರಿಯಾಗಿ 10 ಸಾವಿರ ರೂ ನೀಡಲಾಗುವುದು ಎಂದರು.

ರೇಷ್ಮೆ ಬೆಳೆ ಹಾಗೂ ಅಡಿಕೆ ಬೆಳೆ ಹಾನಿಗೂ ಪರಿಹಾರವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಅವರು ವಿವರಣೆ ನೀಡಿದರು. ಇದುವರೆಗೂ ನೆರೆ ಸಂತ್ರಸ್ಥರಿಗೆ 2950 ಕೋಟಿರೂಪಾಯಿ ಬಿಡುಗಡೆ ಮಾಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದರು. ಮಳೆಯಿಂದಾಗಿ ಅಂಗಡಿ ಮುಗ್ಗಟ್ಟುಗಳ ಹಾನಿಗೆ ತಲಾ 25 ಸಾವಿರ ರೂ ಹಾಗೂ ನೇಕಾರರ ಕೈ ಮಗ್ಗಗಳ ಹಾನಿಗೂ 25 ಸಾವಿರ ರೂ ಪರಿಹಾರ ನೀಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಇರುವ ಆರ್ಥಿಕ ಇತಿಮಿತಿಗಳ ಒಳಗೆ ಮಳೆ ಬಂದು ಮೂರು ದಿನಗಳಲ್ಲಿಯೇ 2,33,633 ಜನರಿಗೆ ತಲಾ 10 ಸಾವಿರ ರೂ ನಂತೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ರಾಜ್ಯದಲ್ಲಿ ಅಪಾರ ಪ್ರಮಾಣದ ಮಳೆಯಿಂದಾಗಿ ರಸ್ತೆ ಹಾನಿಯಾಗಿದ್ದು, ದುರಸ್ತಿಗೆ 8 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ 500 ಕೋಟಿರೂ ಹಣವನ್ನು ತುರ್ತು ಕಾಮಗಾರಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT