ರಾಜ್ಯ

ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ಇದು ಸ್ವಾತಂತ್ರ್ಯ ಹರಣ: ಎಚ್.ಡಿ. ದೇವೇಗೌಡ

Shilpa D

ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಅಧಿವೇಶನಕ್ಕೆ  ಟಿವಿ ಚಾನೆಲ್ ಕ್ಯಾಮೆರಾಗಳಿಗೆ ನಿಷೇಧ ಹೇರುವ ಮೂಲಕ ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ದಶಕಗಳಿಂದ ನಡೆದುಕೊಂಡು ಬಂದಿದ್ದ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ, ರಾಜ್ಯಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲನೆ ನಡೆಸುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ. 

ಕರ್ನಾಟಕ ವಿಧಾನಸಭೆಗೆ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.

SCROLL FOR NEXT