ಪರಮೇಶ್ವರ್ 
ರಾಜ್ಯ

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್

ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದರೇ ಯಾರಿಗೂ ಸಮಸ್ಯೆ ಇಲ್ಲ, ಆದರೆ ಇದೊಂದು ನಾಟಕ, ನಾನು ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗಿದ್ದವನು, ಇದೊಂದು ರಾಜಕೀಯ ಪ್ರೇರಿತ ದಾಳಿ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಲು ಐಟಿ ದಾಳಿ ನಡೆಸಲಾಗಿದೆ ಎಂದು ಮಾಜಿ ಸಂಸದ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡುವಲ್ಲಿ ಐಟಿ ಬ್ಯುಸಿಯಾಗಿದೆ ನಾವು ದೇಶದ ಕಾನೂನು ಪಾಲಿಸುವ ನಾಗರಿಕರು,.ಉಪ ಚುನಾವಣೆಗೆ ಮೊದಲು ನಡೆಯುತ್ತಿರುವ ರಾಜಕೀಯ ಪಿತೂರಿ ಇದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ನಮ್ಮ ವರ್ಚಸ್ಸಿಗೆ ಧಕ್ಕೆ ತರಲು ಕೇವಲ ಕಾಂಗ್ರೆಸ್ ನಾಯಕರುಗಳನ್ನೆ ಟಾರ್ಗೆಟ್ ಮಾಡಲಾಗುತ್ತಿದೆ, ಇದೊಂದು ರೀತಿಯ ರಾಜಕೀಯ ಕಿರುಕುಳ ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗುಜರಾತ್ ಶಾಸಕರುಗಳಿಗೆ ಆಶ್ರಯ ನೀಡಿದ್ದಕ್ಕೆ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಯಿತು,  ಬಿಜೆಪಿ ಯವರು 5 ಕೋಟಿ ರು ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ವಿಧಾನಸಭೆಯಲ್ಲೇ ನೇರ ಆರೋಪ ಮಾಡಿದ್ದಾರೆ,ಅವರ ವಿರುದ್ಧ ಏಕೆ ಕ್ರಮ ಇಲ್ಲ, ಐಟಿ ಮತ್ತು ಇಡಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಪ್ರಶ್ನಿಸಿದ್ದಾರೆ,

ಐಟಿ ದಾಳಿಯ ಬಗ್ಗೆ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ, ಆದರೆ ಜೆಡಿಎಸ್ ಮಾತ್ರ ಮೌನಕ್ಕೆ ಶರಣಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT