ಸಂಗ್ರಹ ಚಿತ್ರ 
ರಾಜ್ಯ

ಅಕ್ರಮ ಕಟ್ಟಡ ನಿರ್ಮಾಣ: ಅಧಿಕಾರಿಗಳನ್ನು ಶಿಕ್ಷಿಸಲು ಹೊಸ ನಿಯಮ ಜಾರಿ

ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಪೌರ ನಿಯಮ ಕಾಯ್ದೆ-1976ರ ಸೆಕ್ಷನ್ 321 ಬಿ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್'ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ.

ಬೆಂಗಳೂರು: ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಪೌರ ನಿಯಮ ಕಾಯ್ದೆ-1976ರ ಸೆಕ್ಷನ್ 321 ಬಿ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್'ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ. 

ಪ್ರಕರಣ ಸಂಬಂಧ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲ ಅಚ್ಚಪ್ಪ ಈ ಮಾಹಿತಿ ನೀಡಿದರು. 

ಜೊತೆಗೆ ಕರ್ನಾಟಕ ಪೌರ ನಿಗಮಗಳು ನಿಯಮಗಳು-2019ರ ಕರಡು ಗೆಜೆಟ್ ಅಧಿಸೂಚನೆಯ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. 

ಹೈಕೋರ್ಟ್ ಆದೇಶದಂತೆ ಅ.3ರಂದು ಪರಿಷ್ಕೃತ ಕರಡು ನಿಯಮ ರೂಪಿಸಲಾಗಿದ್ದು, ಅ.4ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕರಡು ನಿಯಮಗಳು ಬಿಬಿಎಂಪಿ ಸೇರಿದಂತೆ ಪಾಲಿಕೆಗಳಿಗೆ ಅನ್ವಯವಾಗಲಿದೆ. 

ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆ ಆಹ್ವಾನಿಸಲಾಗಿದೆ. ಅದಕ್ಕಾಗಿ 30 ದಿನ ಕಾಲಾವಕಾಶ ನೀಡಲಾಗಿದ್ದು, ನಂತರ ನಿಯಮಗಳನ್ನು ಅಂತಿಮಗೊಳಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು. 

ಪುರಸಭೆ ಅಧಿಕಾರಿಗಳ ದಂಡ ಇಂತಿವೆ...
ಮೊದಲ ಬಾರಿಗೆ ತಪ್ಪು ಮಾಡಿದ ಅಧಿಕಾರಿಗಳಿಗೆ ರೂ.10,000ಕ್ಕಿಂತಲೂ ಕಡಿಮೆಯಿಲ್ಲ ಆದರೆ, ರೂ.25 ಸಾವಿರಕ್ಕಿಂತಲೂ ಹೆಚ್ಚಿಲ್ಲ. 
ಎರಡನೇ ಬಾರಿ ತಪ್ಪು ಮಾಡಿದ ಅಧಿಕಾರಿಗಳಿಗೆ ರೂ.25,000ಕ್ಕಿಂತಲೂ ಕಡಿಮೆಯಿಲ್ಲ ರೂ.50,000ಕ್ಕಿಂತಲೂ ಹೆಚ್ಚು ದಂಡವಿಲ್ಲ. 
ಮೂರನೇ ಬಾರಿಯೂ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ನಿಯಮಗಳ ಉಲ್ಲಂಘನೆಯ ತೀವ್ರತೆಗೆ ಅನುಗುಣವಾಗಿ ಸೆಕ್ಷನ್ 342ರ ಅಡಿಯಲ್ಲಿ ಮುಖ್ಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. 

ನಿಗಮದ ಅಧಿಕಾರಿಗಳ ದಂಡ ಇಂತಿವೆ...
ಮೊದಲ ಬಾರಿಗೆ ತಪ್ಪು ಮಾಡಿದವರಿಗೆ ರೂ.25,000ಕ್ಕಿಂತಲೂ ಕಡಿಮೆಯಿಲ್ಲ 50,000ಕ್ಕಿಂತಲೂ ಹೆಚ್ಚು ದಂಡವಿಲ್ಲ. 
ಎರಡನೇ ಬಾರಿ ತಪ್ಪು ಮಾಡಿದವರಿಗೆ ರೂ.50,000ಕ್ಕಿಂತಲೂ ಕಡಿಮೆಯಿಲ್ಲ ರೂ.1 ಲಕ್ಷಕ್ಕಿಂತಲೂ ಹೆಚ್ಚು ದಂಡವಿಲ್ಲ. 
ಮೂರನೇ ಬಾರಿ ಮಾಡಿದರೆ, ನಿಯಮಗಳ ಉಲ್ಲಂಘನೆಯ ತೀವ್ರತೆಗೆ ಅನುಗುಣವಾಗಿ ಸೆಕ್ಷನ್ 90 ಕೆಎಂಸಿ ಕಾಯ್ದೆಯನ್ವಯ ಆಯುಕ್ತರು ಕ್ರಮ ಕೈಗೊಳ್ಳುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT