ಕೃಷ್ಣ ಬೈರೇಗೌಡ 
ರಾಜ್ಯ

ಲೇಖಾನುದಾನ ಮಂಡಿಸಿ, ಅದೇ ದಿನ ಅನುಮೋದನೆ ಪಡೆಯುವುದು ಸರಿಯಲ್ಲ: ಕೃಷ್ಣ ಬೈರೇಗೌಡ ಆಕ್ಷೇಪ

ಹಣಕಾಸು ವಿಧೇಯಕ, ಹಣಕಾಸು ಬೇಡಿಕೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕನಿಷ್ಠ 15 ದಿನಗಳಿಗಿಂತ ಕಡಿಮೆ ಇರಬಾರದು ಎಂಬ ನಿಯಮವಿದ್ದರೂ ಒಂದೇ ದಿನದಲ್ಲಿ ಸರ್ಕಾರ ಅನುಮೋದನೆ ಪಡೆಯಲು ಮುಂದಾಗಿರುವುದು ಸರಿಯಲ್ಲ.

ಬೆಂಗಳೂರು: ಹಣಕಾಸು ವಿಧೇಯಕ, ಹಣಕಾಸು ಬೇಡಿಕೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕನಿಷ್ಠ 15 ದಿನಗಳಿಗಿಂತ ಕಡಿಮೆ ಇರಬಾರದು ಎಂಬ ನಿಯಮವಿದ್ದರೂ ಒಂದೇ ದಿನದಲ್ಲಿ ಸರ್ಕಾರ ಅನುಮೋದನೆ ಪಡೆಯಲು ಮುಂದಾಗಿರುವುದು ಸರಿಯಲ್ಲ. ವಿಧೇಯಕದಲ್ಲಿ ಏನಿದೆ, ಏನಿಲ್ಲ ಎಂಬುದರ ಬಗ್ಗೆ ಚರ್ಚೆ ನಡೆಸಬೇಕಾಗಿದೆ. 

ಸದನವನ್ನು ಕೇವಲ ಅಂಚೆಯ ಸ್ಟಾಂಪ್‌ಗೆ ಸೀಮಿತಗೊಳಿಸಬಾರದು ಎಂದು ಕಾಂಗ್ರೆಸ್ ಸದಸ್ಯ, ಮಾಜಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

ವಿತ್ತೀಯ ಕಾರ್ಯಕಲಾಪಗಳನ್ನು ಮಂಡಿಸಲು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸದನದಲ್ಲಿ ಮುಂದಾದಾಗ ಕೃಷ್ಣಬೈರೇಗೌಡ ಆಕ್ಷೇಪವೆತ್ತಿ, ಹಣಕಾಸು ಬೇಡಿಕೆಗಳ ಮೇಲೆ ಸಮಗ್ರ ಚರ್ಚೆಯಾಗಬೇಕು. ನಿಯಮ ಕೂಡ ಇದನ್ನೇ ಹೇಳುತ್ತದೆ ಎಂದು ಸ್ಪೀಕರ್ ಅವರ ಗಮನ ಸೆಳೆದರು.

ಆಗ ಸಚಿವ ಮಾಧುಸ್ವಾಮಿ ಮಾತನಾಡಿ, 15 ದಿನಗಳ ವರೆಗೆ ಚರ್ಚೆ ನಡೆಸಬೇಕು ಎಂಬ ಸದನದ ನಿಯಮವಿದ್ದರೂ ಈ ಹಿಂದೆ ಒಂದೇ ಬಾರಿ ಲೇಖಾನುದಾನ ಮಂಡಿಸಿರುವುದು, ಅನುಮೋದನೆ ಪಡೆದುಕೊಂಡಿರುವುದೂ ಈ ಸದನದಲ್ಲಿ ನಡೆದಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಸದನವನ್ನು ಮೂರು ದಿನಕ್ಕೆ ಇಳಿಸಲಾಗಿದೆ. 

ನಮಗೂ ಬೇಡಿಕೆ ಮೇಲೆ ಚರ್ಚೆ ಮಾಡುವ ಆಸಕ್ತಿ ಇದೆ. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಕಲಾಪವನ್ನು ಮೂರು ದಿನಕ್ಕೆ ಇಳಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ ಸಂಪ್ರದಾಯದಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್