ಮಹೇಶ್ ಡಿಸೋಜಾ 
ರಾಜ್ಯ

ಉಡುಪಿ: ಶಾಲಾ ಅವರಣದಲ್ಲೇ ಡಾನ್ ಬಾಸ್ಕೋ ಶಾಲೆ ಪ್ರಾಂಶುಪಾಲ ಆತ್ಮಹತ್ಯೆ

ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಶಾಲೆಯ ಕ್ಯಾಬಿನ್ ಒಳಗೆ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.

ಉಡುಪಿ ಕ್ರೈಸ್ತ ಸಮುದಾಯದ ಈ ಭಾಗದ ಧರ್ಮಗುರುವೂ ಆಗಿದ್ದ ಮಹೇಶ್ ಡಿಸೋಜಾ ಮೂಲತಃ ಮೂಡಬೆಳ್ಳೆ ಗ್ರಾಮದವರಾಗಿದ್ದಾರೆ. ಇವರು 2013ರಲ್ಲಿ ಧರ್ಮಗುರು ದೀಕ್ಷೆ ಹೊಂದಿದ್ದರು.

ಆರೋಗ್ಯ ಮಾತಾ ಇಗರ್ಜಿ ಆಡಳಿತ ಡಾನ್ ಬಾಸ್ಕೊ ಶಾಲೆಯಲ್ಲಿ ಸಿಬಿಎಸ್ ಸಿ ಪಠ್ಯಕ್ರಮ ಅಳವಡಿಕೆಗೆ ಇವರ ಪಾತ್ರ ಮಹತ್ವದ್ದಾಗಿತ್ತು. ಅಪಾರ ಜನಮೆಚ್ಚುಗೆ ಗಳಿಸಿದ್ದ ಮಹೇಶ್ ಡಿಸೋಜಾ ಅವರ ಈ ನಿರ್ಧಾರ ಸಾರ್ವಜನಿಕರಲ್ಲಿ ತೀವ್ರ ನೋವು ತಂದಿದೆ.

ಘಟನೆ ಸಂಬಂಧ ಶಿರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT