ರಮೇಶ್, ಪರಮೇಶ್ವರ್ 
ರಾಜ್ಯ

ಪರಮೇಶ್ವರ್ ಪಿಎ ಆತ್ಮಹತ್ಯೆ :ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲು

ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳ ಪರಿಶೀಲನೆ ಹಾಗೂ ವೈದ್ಯರ ಮೌಖಿಕ ವರದಿಯ ಸಾರಾಂಶ ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.

ರಮೇಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ದೂರು ನೀಡಿದ್ದರು. ಸಿಆರ್ ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.  ರಮೇಶ್ ಬರೆದಿಟ್ಟ ಡೆತ್ ನೋಟ್ ನ್ನು  ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ರಮೇಶ್ ಮನೆಗೆ ಭೇಟಿ ನೀಡಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆದರೆ, ಇದನ್ನು ಐಟಿ ಅಧಿಕಾರಿಗಳು ಒಪ್ಪಿಕೊಳ್ಳುತ್ತಿಲ್ಲ. 

 ರಮೇಶ್ ಮನೆಯ ಸಿಸಿಟಿವಿ ದೃಶ್ಯಾವಳಿ, ಮರಣೋತ್ತರ ವರದಿಗಳನ್ನು ಪೊಲೀಸರು ಪರಿಶೀಲಿಸಲಿದ್ದಾರೆ .ರಮೇಶ್ ಕೊನೆಯ ಬಾರಿಗೆ ಮಾತನಾಡಿದ್ದ ಸ್ನೇಹಿತರಿಂದ ಪೊಲೀಸರು ಹೇಳಿಕೆ ಪಡೆಯಲಿದ್ದಾರೆ. ಅವಶ್ಯಕತೆ ಬಿದ್ದಲ್ಲಿ ಮತ್ತಷ್ಟು  ಸೆಕ್ಷನ್ ಗಳನ್ನು ಸೇರಿಸಲು ಸಿದ್ಧತೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT