ಸಂಗ್ರಹ ಚಿತ್ರ 
ರಾಜ್ಯ

ಮುಚ್ಚುತ್ತಿದೆ ಬಿಎಸ್ಎನ್ಎಲ್: ವದಂತಿ ಎಂದ ಅಧಿಕಾರಿಗಳು

ಕೇಂದ್ರ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್)ನ್ನು ಮುಚ್ಚಲಾಗುತ್ತಿದೆ ಎಂಬುದು ಕೇವಲ ವದಂತಿಯಷ್ಟೇ, ವರದಿಯಲ್ಲಿ ಸತ್ಯಾಂಶಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್)ನ್ನು ಮುಚ್ಚಲಾಗುತ್ತಿದೆ ಎಂಬುದು ಕೇವಲ ವದಂತಿಯಷ್ಟೇ, ವರದಿಯಲ್ಲಿ ಸತ್ಯಾಂಶಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಬಿಎಸ್ಎನ್ಎಲ್ ಮುಚ್ಚಲಾಗುತ್ತಿದೆ ಎಂಬ ವರದಿಗಳ ಕುರಿತಂತೆ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, ಸೇವೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಕೆಲವರು ವೃಥಾ ವದಂತಿಗಳನ್ನು ಹರಡುತ್ತಿದ್ದಾರೆ. ಇಂತಹ ಸುದ್ದಿಗಳಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ. ನಿಗಮವನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವುದು ಸರ್ಕಾರದ ತೀವ್ರ ಪರಿಶೀಲನೆಯಲ್ಲಿದೆ ಎಂದು ಬಿಎಸ್ಎನ್ಎಲ್ ನಿಗಮದ ಕರ್ನಾಟಕ ವೃತ್ತದ ಚೀಫ್ ಜನರಲ್ ಮ್ಯಾನೇಜರ್ ಸುಶಿಲ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

ದೇಶದಾದ್ಯಂತ ದೂರ ಸಂಪರ್ಕದ ಎಲ್ಲಾ ವೃತ್ತಗಳಲ್ಲಿ ಮತ್ತು ದೂರದ ಸ್ಥಳಗಳಲ್ಲಿ ನಿಗಮವು ಮೊಬೈಲ್ ಸೇವೆಗಳನ್ನು ಒದಗಿಸುತ್ತಿದೆ. ನೈಸರ್ಗಿತ ವಿಪತ್ತು ಸಂದರ್ಭದಲ್ಲಿಯೂ ನಿಗಮವು ಗ್ರಾಹಕರ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ. ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿದಾಗ 8 ದಿನಗಳ ಕಾಲ ಉಚಿತ ವಾಯ್ಸ್ ಕಾಲ್ ಹಾಗೂ ಇಂಟರ್ನೆಟ್ ಸೇವೆಯನ್ನು ಸಲ್ಲಿಸಿದ ಏಕೈಕ ಆಪರೇಟರ್ ಬಿಎಸ್ಎನ್ಎಲ್'ಗೆ ಆಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT