ಬೆಂಗಳೂರಿನ ಹೆಚ್ ಎಎಲ್ ಕೇಂದ್ರ ಕಚೇರಿಯ ಹೊರಗೆ ಇರುವ ವಿಮಾನ 
ರಾಜ್ಯ

ವೇತನ ಪರಿಷ್ಕರಣೆ ಮಾತುಕತೆ ವಿಫಲ: ಇಂದು ಹೆಚ್ ಎಎಲ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ 

ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ನೌಕರರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ನೌಕರರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.


ನೌಕರರ ಮನವೊಲಿಸಿ ಕೆಲಸಕ್ಕೆ ಹಾಜರಾಗುವಂತೆ ಎಷ್ಟೇ ಮನವೊಲಿಸಿದರೂ ಕೂಡ ಪ್ರಯೋಜನವಾಗದ ಹಿನ್ನಲೆಯಲ್ಲಿ ಮಾತುಕತೆ ವಿಫಲವಾಗಿರುವುದರಿಂದ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ ಎಂದು ಹೆಚ್ ಎಎಲ್ ನಿನ್ನೆ ತಿಳಿಸಿತ್ತು. ನಿನ್ನೆ ಹೆಚ್ ಎಎಲ್ ನೌಕರರ ಒಕ್ಕೂಟ ಮತ್ತು ವ್ಯವಸ್ಥಾಪಕರ ನಡುವೆ ಮಾತುಕತೆ ನಡೆದಿತ್ತು. ಅದರಲ್ಲಿ ತಮ್ಮ ನ್ಯಾಯಯುತ ಹಾಗೂ ಸಕಾರಣ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಒತ್ತಾಯಿಸಿದ್ದರು.


2017, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಅಕ್ಟೋಬರ್ 14ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವಂತೆ ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಹೆಚ್ ಎಎಲ್ ನೌಕರರ ಒಕ್ಕೂಟ ದೇಶದ ಎಲ್ಲಾ ಕಡೆಗಳಲ್ಲಿರುವ ತನ್ನ ರಕ್ಷಣಾ ಸಾರ್ವಜನಿಕ ಸೇವಾ ಘಟಕಗಳಿಗೆ ನೊಟೀಸ್ ಜಾರಿಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT