ಹೈಕೋರ್ಟ್ 
ರಾಜ್ಯ

ಘನತ್ಯಾಜ್ಯ ನಿರ್ವಹಣೆ: ಬಿಬಿಎಂಪಿ ವಿರುದ್ಧ ಹೈಕೋರ್ಟ್ ಮತ್ತೆ ಗರಂ

ಬೆಂಗಳೂರು ನಗರದ ಹೊರವಲಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಗಿ ಪಡೆಯದೆ ಘನತ್ಯಾಜ್ಯವನ್ನು ಸುರಿಯುತ್ತಿರುವ ಕುರಿತು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಗಿ ಪಡೆಯದೆ ಘನತ್ಯಾಜ್ಯವನ್ನು ಸುರಿಯುತ್ತಿರುವ ಕುರಿತು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
  
ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಇದನ್ನು ತಡೆಯಲು ವಿಫಲವಾಗಿರುವ ಬಿಬಿಎಂಪಿ ಪಾಲಿಕೆ ಸಭೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. 
  
ಕಾನೂನುಬಾಹಿರ ಚಟುವಟಿಕೆಯನ್ನು ಕೂಡ ಎಷ್ಟೊಂದು ಹೆಮ್ಮೆಯಿಂದ ನಡೆಸುತ್ತೀರಲ್ಲಾ ಎಂದು ಅಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ ಪ್ರಕರಣದ ತೀರ್ಪನ್ನು ನಾಳೆಗೆ ಕಾಯ್ದಿರಿಸಿತು. 
  
ಘನ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ಹಾಗೂ ಪಾಲಿಕೆ ಸದಸ್ಯರು ಶಾಮೀಲಾಗಿ ವಾರ್ಷಿಕ ಸಾವಿರ ಕೋಟಿಗೂ ಹೆಚ್ಚು ಬಜೆಟ್ ಹೊಂದಿದ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿ ವ್ಯಾಪಕ ಅಕ್ರಮ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

SCROLL FOR NEXT