ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ: ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ 2 ತಿಂಗಳ ನಂತರ ಪತ್ತೆ

ಕುಮದ್ವತಿ ನದಿ ಪ್ರವಾಹದಲ್ಲಿ‌ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವನ ಶವ ಬರೋಬ್ಬರಿ ಎರಡು ತಿಂಗಳ ನಂತರ ನದಿಪಾತ್ರದಲ್ಲಿ ಪತ್ತೆಯಾಗಿದೆ. 

ಶಿವಮೊಗ್ಗ: ಕುಮದ್ವತಿ ನದಿ ಪ್ರವಾಹದಲ್ಲಿ‌ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವನ ಶವ ಬರೋಬ್ಬರಿ ಎರಡು ತಿಂಗಳ ನಂತರ ನದಿಪಾತ್ರದಲ್ಲಿ ಪತ್ತೆಯಾಗಿದೆ.

ಕುಂಸಿಯ ಅಮರನಾಥ್ ಅವರ ಮೃತ ದೇಹ ಕೊಳೆತ‌ ಸ್ಥಿತಿಯಲ್ಲಿ ಚೊರಡಿ ಸಮೀಪದ ದೊಡ್ಡಿಮಟ್ಟಿ ಬಳಿ ಕುಮದ್ವತಿ ನದಿ ತೀರದಲ್ಲಿ ದೊರೆತಿದೆ.

ಆಗಸ್ಟ್ ತಿಂಗಳಲ್ಲಿ ಚೊರಡಿ ಕುಮದ್ವತಿ‌ ನದಿ ಸೇತುವೆ ಮೇಲೆ ನಿಂತು‌ ನದಿಯನ್ನು ನೋಡುತ್ತಿದ್ದಾಗ ಬೋಲೇರೋ ಡಿಕ್ಕಿ ಹೊಡೆದು ಮೂವರು ನದಿಗೆ ಬಿದ್ದು ಮೃತಪಟ್ಟಿದ್ದರು. ಮರುದಿನವೇ ರಾಮಪ್ಪ ಎಂಬುವರ ಶವಪತ್ತೆಯಾಗಿತ್ತು. ಆದರೆ, ಹರೀಶ್ ಹಾಗೂ ಅಮರನಾಥ್ ಎಂಬುವವರ ಶವಕ್ಕಾಗಿ‌ ರಕ್ಷಣಾ ಸಿಬ್ಬಂದಿ ಸತತ ಹದಿನೈದು ದಿನಗಳ ಕಾರ್ಯಾಚರಣೆ‌ ನಡೆಸಿದರೂ ಅವರಿಬ್ಬರ ಶವ ಪತ್ತೆಯಾಗಿರಲಿಲ್ಲ. ಹೀಗಾಗಿ ಅಸಮಾಧಾನಗೊಂಡ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT