ರಾಜ್ಯ

ಯತ್ನಾಳ್ ಗೆ ನೀಡಿರುವ ಶೋಕಾಸ್ ನೋಟೀಸ್ ವಾಪಸ್ ಪಡೆಯಿರಿ:  ಅಮಿತ್ ಶಾ ಗೆ ಸ್ವಾಮೀಜಿ ಪತ್ರ 

Shilpa D

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ ಅರ್ಧ ಭಾಗ ಮುಳುಗಡೆಯಾಗಿತ್ತು. ನೆರೆ ಸಂತ್ರರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ​ಧ್ವನಿ ಎತ್ತಿದ್ದರು. ಕರ್ನಾಟಕದ ಜನತೆ ಪರವಾಗಿ ಯತ್ನಾಳ್ ಮಾತಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಹೈಕಮಾಂಡ್​​ಶಾಸಕರಿಗೆ ಶೋಕಾಸ್​ ನೋಟಿಸ್​ ನೀಡಿದೆ. ಯತ್ನಾಳ್ ಬಿಜೆಪಿಯ ದಕ್ಷ ನಾಯಕ. ಇವರ ಧ್ವನಿಗೆ ನಾವೂ ಬೆಂಬಲ ನೀಡಿದ್ದೇವೆ. ಹೀಗಾಗಿ ಕೂಡಲೇ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. 

ಒಂದು ವೇಳೆ ಯತ್ನಾಳ್ ಮಾತಿನಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಬೇಕೆಂದು ಶ್ರೀಶೈಲ ಜಗದ್ಗುರು ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಕೂಡಲೇ ಶೋಕಾಸ್ ನೊಟೀಸ್ ವಾಪಸ್ ಪಡೆಯಬೇಕು, ಇಲ್ಲದಿದ್ದರೇ ಉತ್ತರ ಕರ್ನಾಟಕದಲ್ಲಿ ಬಿಜಿಪಿಗೆ ಸಮಸ್ಯೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ

SCROLL FOR NEXT