ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ಮನೆ ಕುಸಿದು ಮೂರು ಮಂದಿ ದಾರುಣ ಸಾವು

ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದ ಮನೆಯ ಮೇಲ್ಚಾವಣಿಗೆ ಬಿದ್ದು ಅಕ್ಕ-ತಮ್ಮಂದಿರು ಸಾವನ್ನಪ್ಪಿದ ದುರ್ಘಟನೆ ಯಲಮಗೇರಿ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ: ಕಳೆದ  ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದ ಮನೆಯ ಮೇಲ್ಚಾವಣಿಗೆ ಬಿದ್ದು ಅಕ್ಕ-ತಮ್ಮಂದಿರು ಸಾವನ್ನಪ್ಪಿದ ದುರ್ಘಟನೆ ಯಲಮಗೇರಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಸುಜಾತ (23), ಅಮರೇಶ್ (18), ಗವಿಸಿದ್ದಪ್ಪ(15)  ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದ ಮನೆ ನೆನೆದಿತ್ತು. ಮನೆ ಬೀಳುವುದಿಲ್ಲ ಎಂದು ಕುಟುಂಬ ಸದಸ್ಯರು ಮನೆಯಲ್ಲೆ ವಾಸವಾಗಿದ್ದರು. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯ ಮೇಲ್ಚಾವಣಿಗೆ ಕುಸಿದು ಬಿದ್ದಿತ್ತು. ಆ ವೇಳೆ ಮನೆಯಲ್ಲಿ ಮಲಗಿದ್ದ ಅಕ್ಕ- ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದರು

ಅದೃಷ್ಟವಶಾತ್ ತಂದೆ ಸೋಮಣ್ಣ ಕುದುರಿಮೋತಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಕೊಪ್ಪಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT