ವಿ.ಎಸ್. ಉಗ್ರಪ್ಪ 
ರಾಜ್ಯ

ನೆರೆ ನಷ್ಟದ ಅಧ್ಯಯನಕ್ಕೆ ಜಂಟಿ ಸದನ ಸಮಿತಿ ರಚನೆಗೆ ಉಗ್ರಪ್ಪ ಆಗ್ರಹ

ರಾಜ್ಯದಲ್ಲಿ ನೆರೆಯಿಂದಾದ ಹಾನಿ ಬಗ್ಗೆ ಸತ್ಯಶೋಧನೆ ನಡೆಸಬೇಕು, ಸತ್ಯ  ಶೋಧನೆಗೆ ಜಂಟಿಸದನ ಸಮಿತಿ ರಚನೆ ಮಾಡಬೇಕು ಎಂದು ಮಾಜಿ ಸಂಸದ ಕಾಂಗ್ರೆಸ್ ಮುಖಂಡ  ವಿ.ಎಸ್.ಉಗ್ರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರು:  ರಾಜ್ಯದಲ್ಲಿ ನೆರೆಯಿಂದಾದ ಹಾನಿ ಬಗ್ಗೆ ಸತ್ಯಶೋಧನೆ ನಡೆಸಬೇಕು, ಸತ್ಯ  ಶೋಧನೆಗೆ ಜಂಟಿಸದನ ಸಮಿತಿ ರಚನೆ ಮಾಡಬೇಕು ಎಂದು ಮಾಜಿ ಸಂಸದ ಕಾಂಗ್ರೆಸ್ ಮುಖಂಡ  ವಿ.ಎಸ್.ಉಗ್ರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಹೇಳಿಕೆ "ಕುಣಿಯಲಾರದವಳು ನೆಲ ಡೊಂಕು  ಅಂದಳಂತೆ" ಎಂಬ ಗಾದೆ ಮಾತಿನಂತಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೆರೆಪೀಡಿತ ಎಲ್ಲಾ  ಕ್ಷೇತ್ರಗಳಿಗೆ ಭೇಟಿ ವರದಿ ಮಾಡಿದೆ. ಆದರೆ ರಾಜ್ಯ ಸರ್ಕಾರ ವರದಿ ಸತ್ಯಕ್ಕೆ  ದೂರವಾಗಿದೆ ಎಂದರು.

 ರಾಜ್ಯ ಸರ್ಕಾರ ಮೊದಲು, 38 ಸಾವಿರ ಕೋಟಿ ಎಂದು ಹೇಳಿತ್ತು, ಕೇಂದ್ರ  ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಕಳಿಸಿದ್ದ ನೆರೆನಷ್ಟ ವರದಿಯನ್ನು ಹಿಂದೆ ಕಳಿಸಿದಾಗ  ಮತ್ತೆ 35 ಸಾವಿರ  ಕೋಟಿ ಹಾನಿ ವರದಿ ಕಳುಹಿಸಿದ್ದಾರೆ. ಕೇಂದ್ರದ ಅಧ್ಯಯನ ತಂಡ ಇದುವರೆಗೂ ಕೇಂದ್ರಕ್ಕೆ ವರದಿಯನ್ನೇ ನೀಡಿಲ್ಲ. ಹೀಗಾಗಿ ನೆರೆ ನಷ್ಟ ಬಗ್ಗೆ ಸರ್ಕಾರ ಸತ್ಯ ಶೋಧನೆ ನಡೆಸಬೇಕು‌. ಒಂದುವೇಳೆ ಸರ್ಕಾರ ಜನರ ನೋವಿಗೆ ಸ್ಪಂದಿಸದಿದ್ದರೆ  ಹೋರಾಟ ಮಾಡುವುದಾಗಿ ವಿ.ಎಸ್. ಉಗ್ರಪ್ಪ ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

SCROLL FOR NEXT