ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಸ್ಪೀಕರ್ ಸಲಹೆಗಾರರಾಗಿ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ನೇಮಕ: ಹೊಸ ಸಂಪ್ರದಾಯಕ್ಕೆ ಕಾಗೇರಿ ನಾಂದಿ

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.

ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.

ನಿವೃತ್ತ ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು ಕಾಗೇರಿ ಅವರ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ವಿಧಾನಸಭೆ ಹಾಲಿ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಈ ನೇಮಕಾತಿ ಸ್ಪೀಕರ್ ಅವರಿಗೆ ಮಹಿಳಾ ಅಧಿಕಾರಿ ಮೇಲೆ ನಂಬಿಕೆ ಇಲ್ಲ ಎನ್ನುವುದನ್ನು ಎತ್ತಿ ತೋರಿಸುತ್ತದೆ ಎನ್ನುವ ಆರೋಪವೂ ಕೇಳಿ ಬಂದಿದೆ.

ಇನ್ನು ನಿವೃತ್ತ ಅಧಿಕಾರಿಯನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಕ್ಕೆ ಸಚಿವಾಲಯದಲ್ಲೇ ಸ್ಪೀಕರ್ ವಿರುದ್ದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. 

ಸ್ಪೀಕರ್ ಕಾಗೇರಿಯವರಿಗೆ ಅನುಭವದ ಕೊರತೆಯೋ ಅಥವಾ ಸಚಿವಾಲಯದ ಅಧಿಕಾರಿಗಳ ಮೇಲಿನ ಅಪನಂಬಿಕೆಯಿಂದ ಹೀಗೆ ತಮ್ಮ ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೋ ಎಂಬ ಪ್ರಶ್ನೆ ಉದ್ಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT