ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ 101 ಐಎಎಸ್, ಐಪಿಎಸ್ ಅಧಿಕಾರಿಗಳ ಹುದ್ದೆಗಳು ಖಾಲಿ

ರಾಜ್ಯ ಸರ್ಕಾರದಲ್ಲಿ 101 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆ ಖಾಲಿಯಿದೆ. ರಾಜ್ಯ ಸರ್ಕಾರದಡಿ ಒಟ್ಟು 529 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆಯಿದ್ದು ಸದ್ಯ 428 ಮಂದಿ ಅಧಿಕಾರಿಗಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ 101 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆ ಖಾಲಿಯಿದೆ. ರಾಜ್ಯ ಸರ್ಕಾರದಡಿ ಒಟ್ಟು 529 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆಯಿದ್ದು ಸದ್ಯ 428 ಮಂದಿ ಅಧಿಕಾರಿಗಳಿದ್ದಾರೆ.


ಅಧಿಕಾರಿಗಳ ಕೊರತೆಯಿಂದಾಗಿ ಈಗಿರುವವರು ಒಂದಕ್ಕಿಂತ ಹೆಚ್ಚು ಇಲಾಖೆಗಳನ್ನು ನಿಭಾಯಿಸಬೇಕಾಗಿದೆ. ಮುಂದಿನ ವರ್ಷದ ಅಂತ್ಯದ ಹೊತ್ತಿಗೆ ಸುಮಾರು 25 ಅಧಿಕಾರಿಗಳು ರಾಜೀನಾಮೆ ನೀಡಲಿರುವುದರಿಂದ ಈಗಿರುವ ಅಧಿಕಾರಿಗಳ ಮೇಲೆ ಕೆಲಸದ ಹೊರೆ ಜಾಸ್ತಿಯಾಗಲಿದೆ.


ಡಿಪಿಎಆರ್ ಪ್ರಕಾರ, 314 ಅನುಮೋದಿತ ಐಎಎಸ್ ಹುದ್ದೆಗಳಿದ್ದು ಅವುಗಳ ಪೈಕಿ ಈಗ 256 ಹುದ್ದೆಗಳಲ್ಲಿ ಅಧಿಕಾರಿಗಳಿದ್ದಾರೆ. ಐಪಿಎಸ್ ಅಧಿಕಾರಿಗಳ ಹುದ್ದೆಗಳಲ್ಲಿ 172 ಅಧಿಕಾರಿಗಳಿದ್ದು ಅನುಮೋದಿತ ಹುದ್ದೆಗಳ ಸಂಖ್ಯೆ 215 ಆಗಿದೆ. ಈ ವರ್ಷ 13 ಐಎಎಸ್ ಅಧಿಕಾರಿಗಳು ನಿವೃತ್ತಿ ಹೊಂದುತ್ತಿದ್ದು ಐಪಿಎಸ್ ವಿಭಾಗಗಳಲ್ಲಿ ನಾಲ್ವರು ಈ ವರ್ಷ ನಿವೃತ್ತಿಯಾಗುತ್ತಿದ್ದಾರೆ.


ಮುಂದಿನ ವರ್ಷ ನಿವೃತ್ತಿಯಾಗುವ ಅಧಿಕಾರಿಗಳ ಪಟ್ಟಿಯನ್ನು ನಾವು ಸಿದ್ದ ಮಾಡುತ್ತಿದ್ದೇವೆ. ಅದರ ಪ್ರಕಾರ 16 ಐಎಎಸ್ ಮತ್ತು 12 ಐಪಿಎಸ್ ಅಧಿಕಾರಿಗಳು 2020ರ ಕೊನೆಗೆ ನಿವೃತ್ತಿಯಾಗುತ್ತಿದ್ದಾರೆ. 2017ರಲ್ಲಿ 75 ಐಎಎಸ್ ಅಧಿಕಾರಿಗಳ ಕೊರತೆಯಿತ್ತು. ಈಗ ಪರಿಸ್ಥಿತಿ ಸುಧಾರಿಸಿದೆ. ಸದ್ಯ 58 ಐಎಎಸ್ ಅಧಿಕಾರಿಗಳ ಕೊರತೆಯಿದೆ. 1990ರ ದಶಕದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಕೊರತೆ ಆರಂಭವಾಯಿತು. ವಾರ್ಷಿಕವಾಗಿ ಅಧಿಕಾರಿಗಳನ್ನು ಸೇರಿಸಿಕೊಳ್ಳುವ ಪ್ರವೃತ್ತಿ 150ರಿಂದ 80ಕ್ಕೆ ಇಳಿಯಿತು.

ಇವುಗಳಲ್ಲಿ ಕರ್ನಾಟಕಕ್ಕೆ ಪ್ರತಿವರ್ಷ ನಾಲ್ಕು ಅಥವಾ ಅದಕ್ಕಿಂತಲೂ ಕಡಿಮೆ ಅಧಿಕಾರಿಗಳು ಸಿಗುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೇ ವಾರ್ಷಿಕವಾಗಿ ಅಂತರ ಭಾರತೀಯ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಸಂಖ್ಯೆ 180ಕ್ಕೆ ಏರಿಕೆಯಾಯಿತು. ರಾಜ್ಯ ಸರ್ಕಾರ ಪ್ರತಿವರ್ಷ 9 ಅಥವಾ 10 ಅಧಿಕಾರಿಗಳನ್ನು ಪಡೆದುಕೊಳ್ಳುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT