ಯಡಿಯೂರಪ್ಪ 
ರಾಜ್ಯ

ರೈತರ ಎಲ್ಲಾ ಸಾಲ ಮನ್ನಾ ಮಾಡಲಾಗಲ್ಲ: ಕೃಷಿಕರಿಗೆ ಶಾಕ್ ಕೊಟ್ಟ ಸಿಎಂ ಯಡಿಯೂರಪ್ಪ

ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ:  ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

"ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ನೆರೆಯಿಂದಾಗಿ ಅನೇಕ ಜಿಲ್ಲೆಗಳ ಜನ ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅದರ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಲಲಾಗುತ್ತಿದೆ." ಸುದ್ದಿಗಾರರಿಗೆ ಸಿಎಂ ತಿಳಿಸಿದ್ದಾರೆ.

ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ,ಟಿಕೆಟ್ ಅಂತಿಮ ಗೊಳಿಸಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಪಪ್ರಚಾರಕ್ಕೆ ಯಾವುದೇ ಅವಕಾಶ ಕೊಡುವ ಅಗತ್ಯವಿಲ್ಲ.ಅಕ್ಟೋಬರ್ 22ಕ್ಕೆ ಸುಪ್ರೀಂಕೋರ್ಟ್ ಏನು​ ತೀರ್ಪು ಬರುತ್ತದೆ ಎನ್ನುವುದನ್ನು ನೋಡಿಕೊಂಡು ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸ ಲಾಗುತ್ತದೆ.ಈ ಉಪಚುನಾವಣೆ ಪಕ್ಷ ಹಾಗೂ ಸರ್ಕಾರಕ್ಕೆ ಬಹಳ ಮಹತ್ವದ್ದು.ಈ ಹಿನ್ನೆಲೆ ಯಲ್ಲಿ ಪ್ರತಿ ಕ್ಷೇತ್ರಕ್ಕೆ ಓರ್ವ ಸಚಿವರನ್ನು ಉಸ್ತು ವಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT