ಸಂಗ್ರಹ ಚಿತ್ರ 
ರಾಜ್ಯ

ಮಹಾರಾಷ್ಟ್ರ ಚುನಾವಣೆ: ನೆರೆಹಾವಳಿ ನಡುವೆಯೂ ರಾಜ್ಯ ಬಿಜೆಪಿ ನಾಯಕರಿಂದ ಪ್ರಚಾರ, ಭಾರೀ ಟೀಕೆ

ರಾಜ್ಯದಲ್ಲಿ ನೆರೆ ಹಾವಳಿ ತಲೆದೋರಿದ್ದು, ಈ ನಡುವೆಯೇ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿವೆ.

ಬೆಳಗಾವಿ: ರಾಜ್ಯದಲ್ಲಿ ನೆರೆ ಹಾವಳಿ ತಲೆದೋರಿದ್ದು, ಈ ನಡುವೆಯೇ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿವೆ. 

ಪ್ರವಾಹದಿಂದಾಗಿ ರಾಜ್ಯದ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ್ ನಾರಾಯಣ್ ಹಾಗೂ ಲಕ್ಷ್ಮಣ್ ಸವದಿಯವರು ಬಿಜೆಪಿ ಪರವಾಗಿ ಮಹಾರಾಷ್ಟ್ರದಲ್ಲಿ ಪ್ರಚಾರ ನಡೆಸಲು ತೆರಳುತ್ತಿದ್ದಾರೆ. 

ಅಥಣಿ, ಬೆಳಗಾವಿ ಮಾಜಿ ಶಾಸಕರ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಂಬಂಧಿಕರಾಗಿರುವ ಮೋಹನ್ ಶಾ ಕೂಡ, ಕರ್ನಾಟ ಮುಖ್ಯಮಂತ್ರಿಗಳು ಹಾಗೂ ಅವರ ತಂಡ ಪ್ರವಾಹ ಪರಿಹಾರ ಕಾರ್ಯಗಳತ್ತ ಗಮನ ಹರಿಸಬೇಕೆಂದು ಹೇಳಿದ್ದಾರೆ. 

ಕರ್ನಾಟಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ತಮ್ಮದೇ ರಾಜ್ಯದ ಜನರು ಸಂಕಷ್ಟದಲ್ಲಿದ್ದರೂ, ಮಹಾರಾಷ್ಟ್ರ ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರವಾಹ ಪೀಡಿತರನ್ನು ನಿರ್ಲಕ್ಷ್ಯ ವಹಿಸುತ್ತಿರುವುದಕ್ಕೆ ಅಥಣಿ ಮಾಜಿ ಶಾಸಕ ಶಾಹ್'ಜಹಾನ್ ದೊಂಗರ್ಗಾಂವ್ ಅವರೂ ಕೂಡ ಟೀಕೆ ಮಾಡಿದ್ದಾರೆ. 

ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಹಾಗೂ ಸವದಿಯವರು ಭಾಗಿಯಾಗುತ್ತಿರುವುದು ನ್ಯಾಯಯುತವಲ್ಲ. ಮಹಾರಾಷ್ಟ್ರ ಗಡಿ ಜಿಲ್ಲೆಗಳ ಮತದಾರರನ್ನು ಸೆಳೆಯಲು ಮಾತ್ರ ಸವದಿಯರಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ ಎಂದು ಆರೋಪಿಸಿದ್ದಾರೆ. 

ಡಿಸಿಎಂ ಅಶ್ವತ್ಥ್ ನಾರಾಯಣ್ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದು, ಮುಂದಿನ 2 ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಇದಲ್ಲದೆ, ಮುಂದಿನ 2 ದಿನಗಳ ಕಾಲ ಯಡಿಯೂರಪ್ಪ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅ.16ಕ್ಕೆ ಬೆಳಗಾವಿಗೆ ತೆರಳುವ ಅವರು, ಸಾಂಗ್ಲಿ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಯಡಿಯೂರಪ್ಪ ಅವರೊಂದಿಗೆ ಮಹಾರಾಷ್ಟ್ರ ಬಿಜೆಪಿ ನಾಯಕರೂ ಕೂಡ ಪಾಲ್ಗೊಳ್ಳುತ್ತಿದ್ದಾರೆ. 

ಸೋಲಾಪುರ, ಅಕ್ಕಲ್ಕೊಟೆ, ಚಕೂರು, ಲಾಥೂರಿನಲ್ಲಿ ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. ಇದಾಗ ಬಳಿಕ ಪುಣೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಟೀಲ್ ಅವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT