ರಾಜ್ಯ

ಕರ್ನಾಟಕ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಿನಾಮೆ: ಕೇಂದ್ರ ಗೃಹ ಇಲಾಖೆ ಅಂಗೀಕಾರ!

Srinivasamurthy VN

ಬೆಂಗಳೂರು: ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ.

2011ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಮೇ 28ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. 

ಖಡಕ್ ಹಾಗೂ ದಕ್ಷ ಐಪಿಎಸ್ ಅಧಿಕಾರಿ ಎಂದೇ ಫೇಮಸ್ ಆಗಿದ್ದ ಅಣ್ಣಾಮಲೈ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದರು. 2011ರ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಂಡಿದ್ದರು.

SCROLL FOR NEXT