ರಾಜ್ಯ

ಎಂ.ಎಂ‌. ಕಲಬುರ್ಗಿ ಹತ್ಯೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Lingaraj Badiger

ಧಾರವಾಡ: ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಅವರನ್ನು ಹತ್ಯೆಗೈದ ಆರೋಪಿಗಳು ಗುರುವಾರ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.

ಎಸ್‌.ಐ‌.ಟಿ ತಂಡ ಚಾರ್ಜಶೀಟ್ ಸಲ್ಲಿಸಿದ ನಂತರ ಇದೇ ಮೊದಲ ಬಾರಿಗೆ ವಿಚಾರಣೆ ನಡೆಯುತ್ತಿದೆ. ಕಳೆದ ಆಗಸ್ಟ್ 17ರಂದು ಜಿಲ್ಲಾ ನ್ಯಾಯಾಲಯಕ್ಕೆ ಎಸ್.ಐ.ಟಿ ತಂಡ ಚಾರ್ಜಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಚಾರ್ಜಶೀಟ್ ಸಲ್ಲಿಕೆ ಬಳಿಕ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ.

ಹತ್ಯೆಗೈದ ಆರು ಆರೋಪಿಗಳ ಪೈಕಿ ಐವರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಓರ್ವ ಆರೋಪಿ ಗೈರಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಗಳು ಮುಂಬೈ, ಮೈಸೂರು, ಬೆಳಗಾವಿ ಹಾಗೂ ಧಾರವಾಡ ಜೈಲಿನಲ್ಲಿದ್ದರು.

SCROLL FOR NEXT