ಸಂಗ್ರಹ ಚಿತ್ರ 
ರಾಜ್ಯ

ಇಂದು ತಡರಾತ್ರಿ ತಲಕಾವೇರಿ ತೀರ್ಥೋದ್ಭವ

ಕಾವೇರಿ ನದಿಯ ಉಗಮ ಸ್ಥಳ ಕೊಡಗಿನ ತಲಾ ಕಾವೇರಿಯಲ್ಲಿ ಗುರುವಾರ ತಡರಾತ್ರಿ 12 ಗಂಟೆ 59 ನಿಮಿಷಕ್ಕೆ ಪವಿತ್ರ ತುಲಾ ಸಂಕ್ರಮಣ ತೀರ್ಥೋದ್ಭವ ಘಟಿಸಲಿದೆ.

ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಳ ಕೊಡಗಿನ ತಲಾ ಕಾವೇರಿಯಲ್ಲಿ ಗುರುವಾರ ತಡರಾತ್ರಿ 12 ಗಂಟೆ 59 ನಿಮಿಷಕ್ಕೆ ಪವಿತ್ರ ತುಲಾ ಸಂಕ್ರಮಣ ತೀರ್ಥೋದ್ಭವ ಘಟಿಸಲಿದೆ.

ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಅ.18 ರಂದು ತೀರ್ಥೋದ್ಭವ ನಡೆಯಲಿದ್ದು, ಈ ವಾರ್ಷಿಕ ಕಾರ್ಯಕ್ರಮಕ್ಕೆ ಕೊಡಗು ಸಜ್ಜಾಗಿದೆ. ಈ ಕುರಿತಂತೆ ಭಾಗಮಂಡಲದ ತಲಕಾವೇರಿ ದೇವಸ್ಥಾನದ ತಟದಲ್ಲಿ ಬೆಳಗ್ಗೆ 12.59 ಕ್ಕೆ ಸರಿಯಾಗಿ ತೀರ್ಥೋದ್ಭವವಾಗಲಿದೆ ಎಂದು ದೇವಸ್ಥಾನದ ಆಡಳಿತ  ಸಮಿತಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ದೇಗುಲದ ಆಡಳಿತ ಮಂಡಳಿ ಸದಸ್ಯ ಕಾವೇರಪ್ಪ ಅವರು, 'ಈಗಾಗಲೇ ರಾಜ್ಯ ಮತ್ತು ಹೊರರಾಜ್ಯಗಳ ಸಾವಿರಾರು ಭಕ್ತರು ತಲಾ ಕಾವೇರಿಯತ್ತ ಧಾವಿಸಿದ್ದಾರೆ. ತೀರ್ಥೋದ್ಭವಕ್ಕೆ ಆಗಮಿಸಿವ ಭಕ್ತಾದಿಗಳಿಗೆ ವಿರಾಜಪೇಟೆಯಿಂದ ತಲಕಾವೇರಿ. ವಿರಾಜಪೇಟೆ-ಕಾಡನೂರ್ -ಕೊಡಂಗ -ಎಡಪಾಲ-ನಾಪೊಕ್ಲು-ನೀಲಾಜಿ-ಬಲ್ಲಮಾವತಿ-ಅಯ್ಯಂಗೇರಿ-ಭಾಗಮಂಡಲ ರಸ್ತೆಯಾಗಿ ತಲಕಾವೇರಿ ಪ್ರವೇಶಿಸಬಹುದೆಂದು' ತಿಳಿಸಿದ್ದಾರೆ.

ಈ ವಾರ್ಷಿಕ ಕಾರ್ಯಕ್ರಮಕ್ಕೆ ಕೊಡಗು ಸಜ್ಜಾಗಿದ್ದು, ಎಲ್ಲೆಡೆ ದಾರಿ ದೀಪಗಳು,ಎಲ್ಇಡಿ ಬಲ್ಬ್​ಗಳನ್ನು ಅಳವಡಿಸಲಾಗಿದೆ. ತೀರ್ಥೊದ್ಭವದ ನಂತರ ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ಜಾತ್ರೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT