ಸಂಗ್ರಹ ಚಿತ್ರ 
ರಾಜ್ಯ

ಇಂದು ತಡರಾತ್ರಿ ತಲಕಾವೇರಿ ತೀರ್ಥೋದ್ಭವ

ಕಾವೇರಿ ನದಿಯ ಉಗಮ ಸ್ಥಳ ಕೊಡಗಿನ ತಲಾ ಕಾವೇರಿಯಲ್ಲಿ ಗುರುವಾರ ತಡರಾತ್ರಿ 12 ಗಂಟೆ 59 ನಿಮಿಷಕ್ಕೆ ಪವಿತ್ರ ತುಲಾ ಸಂಕ್ರಮಣ ತೀರ್ಥೋದ್ಭವ ಘಟಿಸಲಿದೆ.

ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಳ ಕೊಡಗಿನ ತಲಾ ಕಾವೇರಿಯಲ್ಲಿ ಗುರುವಾರ ತಡರಾತ್ರಿ 12 ಗಂಟೆ 59 ನಿಮಿಷಕ್ಕೆ ಪವಿತ್ರ ತುಲಾ ಸಂಕ್ರಮಣ ತೀರ್ಥೋದ್ಭವ ಘಟಿಸಲಿದೆ.

ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಅ.18 ರಂದು ತೀರ್ಥೋದ್ಭವ ನಡೆಯಲಿದ್ದು, ಈ ವಾರ್ಷಿಕ ಕಾರ್ಯಕ್ರಮಕ್ಕೆ ಕೊಡಗು ಸಜ್ಜಾಗಿದೆ. ಈ ಕುರಿತಂತೆ ಭಾಗಮಂಡಲದ ತಲಕಾವೇರಿ ದೇವಸ್ಥಾನದ ತಟದಲ್ಲಿ ಬೆಳಗ್ಗೆ 12.59 ಕ್ಕೆ ಸರಿಯಾಗಿ ತೀರ್ಥೋದ್ಭವವಾಗಲಿದೆ ಎಂದು ದೇವಸ್ಥಾನದ ಆಡಳಿತ  ಸಮಿತಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ದೇಗುಲದ ಆಡಳಿತ ಮಂಡಳಿ ಸದಸ್ಯ ಕಾವೇರಪ್ಪ ಅವರು, 'ಈಗಾಗಲೇ ರಾಜ್ಯ ಮತ್ತು ಹೊರರಾಜ್ಯಗಳ ಸಾವಿರಾರು ಭಕ್ತರು ತಲಾ ಕಾವೇರಿಯತ್ತ ಧಾವಿಸಿದ್ದಾರೆ. ತೀರ್ಥೋದ್ಭವಕ್ಕೆ ಆಗಮಿಸಿವ ಭಕ್ತಾದಿಗಳಿಗೆ ವಿರಾಜಪೇಟೆಯಿಂದ ತಲಕಾವೇರಿ. ವಿರಾಜಪೇಟೆ-ಕಾಡನೂರ್ -ಕೊಡಂಗ -ಎಡಪಾಲ-ನಾಪೊಕ್ಲು-ನೀಲಾಜಿ-ಬಲ್ಲಮಾವತಿ-ಅಯ್ಯಂಗೇರಿ-ಭಾಗಮಂಡಲ ರಸ್ತೆಯಾಗಿ ತಲಕಾವೇರಿ ಪ್ರವೇಶಿಸಬಹುದೆಂದು' ತಿಳಿಸಿದ್ದಾರೆ.

ಈ ವಾರ್ಷಿಕ ಕಾರ್ಯಕ್ರಮಕ್ಕೆ ಕೊಡಗು ಸಜ್ಜಾಗಿದ್ದು, ಎಲ್ಲೆಡೆ ದಾರಿ ದೀಪಗಳು,ಎಲ್ಇಡಿ ಬಲ್ಬ್​ಗಳನ್ನು ಅಳವಡಿಸಲಾಗಿದೆ. ತೀರ್ಥೊದ್ಭವದ ನಂತರ ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ಜಾತ್ರೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT