ವಿದ್ಯಾರ್ಥಿಗಳು 
ರಾಜ್ಯ

ಹಾವೇರಿ: ಪರೀಕ್ಷೆಯಲ್ಲಿ ನಕಲು ತಪ್ಪಿಸಲು ಮಾಸ್ಟರ್ ಪ್ಲಾನ್!

ಪರೀಕ್ಷೆಯಲ್ಲಿ ನಕಲು ತಪ್ಪಿಸಲು  ಹಾವೇರಿಯ ಕಾಲೇಜುವೊಂದರ  ಆಡಳಿತ ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಭಗತ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕ್ರಮ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಹಾವೇರಿ: ಪರೀಕ್ಷೆಯಲ್ಲಿ ನಕಲು ತಪ್ಪಿಸಲು  ಹಾವೇರಿಯ ಕಾಲೇಜುವೊಂದರ  ಆಡಳಿತ ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಭಗತ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕ್ರಮ ಇದೀಗ ಎಲ್ಲೆಡೆ ವೈರಲ್ ಆಗಿದೆ.

ರಸಾಯನ ಶಾಸ್ತ್ರದ ತ್ರೈಮಾಸಿಕ ಪರೀಕ್ಷೆ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಲೆಗೆ ರಟ್ಟಿನ ಬಾಕ್ಸ್ ಹಾಕಿಸಿ, ಕಣ್ಣು ಮಾತ್ರ ಕಾಣಿಸುವಂತೆ ಕಿಂಡಿ ಬಿಟ್ಟು ಪರೀಕ್ಷೆ ಬರೆಸಲಾಗಿದೆ. ವಿದ್ಯಾರ್ಥಿಗಳು ನಕಲು ಮಾಡಬಾರದು ಎಂಬ ಉದ್ದೇಶದಿಂದ ಕಾಲೇಜಿನ ಆಡಳಿತ ಮಂಡಳಿ ಈ ರೀತಿ ಪರೀಕ್ಷೆ ಬರೆಸಿದೆ. 30 ಕ್ಕೂ ಅಧಿಕ ವಿದ್ಯಾರ್ಥಿಗಳು ಉಸಿರಾಡಲೂ ಕಷ್ಟಪಡುತ್ತಾ ಪರೀಕ್ಷೆ ಬರೆದಿದ್ದಾರೆ.

ಸಾಹಸಪಟ್ಟು ಪ್ರಶ್ನೆ ಪತ್ರಿಕೆ ಓದಿಕೊಂಡು ಹೇಗೋ ಪರೀಕ್ಷೆ ಬರೆದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಈ ಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಡಿಡಿಪಿಐ ಎಸ್. ಸಿ. ಫೀರಜಾದೆ, ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದು, ಮೂರು ದಿನಗಳೊಳಗೆ ಲಿಖಿತ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT