ಸಾಂದರ್ಭಿಕ ಚಿತ್ರ 
ರಾಜ್ಯ

ಗಂಗಾವತಿ: ಗಾಂಧಿ ಪುರಸ್ಕಾರ ಪಡೆದ ಗ್ರಾಮದಲ್ಲಿ ಡೆಂಗಿಗೆ ಬಾಲಕ ಬಲಿ

ಸ್ವಚ್ಚತೆ ನೈರ್ಮಲ್ಯ ನಿರ್ವಹಣೆಗಾಗಿ ಇತ್ತೀಚೆಗಷ್ಟೆ ಗಾಂಧಿ ಗ್ರಾಮ ಪುರಸ್ಕಾರ ಪಡೆದ ತಾಲ್ಲೂಕಿನ ಶ್ರೀರಾಮನಗರದಲ್ಲಿ ಬಾಲಕನೊಬ್ಬ ಡೆಂಗಿ ಜ್ವರಕ್ಕೆ ಸಾವನ್ನಪ್ಪಿದ್ದಾನೆ. 

ಗಂಗಾವತಿ: ಸ್ವಚ್ಚತೆ ನೈರ್ಮಲ್ಯ ನಿರ್ವಹಣೆಗಾಗಿ ಇತ್ತೀಚೆಗಷ್ಟೆ ಗಾಂಧಿ ಗ್ರಾಮ ಪುರಸ್ಕಾರ ಪಡೆದ ತಾಲ್ಲೂಕಿನ ಶ್ರೀರಾಮನಗರದಲ್ಲಿ ಬಾಲಕನೊಬ್ಬ ಡೆಂಗಿ ಜ್ವರಕ್ಕೆ ಸಾವನ್ನಪ್ಪಿದ್ದಾನೆ. 

ಗ್ರಾಮದ ಎರಡನೇ ವಾರ್ಡಿನ ಇಮ್ತಿಯಾಜ್, ಅಬ್ದುಲ್ ಖಾದರ್ ಜಿಲಾನ್ (12) ಮೃತ ಬಾಲಕ. ಬಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಡೆಂಗ್ಯೂ ಎಂದು ವೈದ್ಯಕೀಯ ತಪಾಸಣೆಗಳು ದೃಢಪಡಿಸಿವೆ. 
ಜ್ವರಕಾಣಿಸಿಕೊಂಡ ಬೆನ್ನಲ್ಲೆ ಬಾಲಕನ ದೇಹದೊಳಗೆ ಪ್ಲೇಟ್ಲೆಟ್ ಕೌಂಟ್ ಗಣನೀಯ ಪ್ರಮಾದಲ್ಲಿ ಕುಸಿತವಾಗಿದೆ‌ ಹೀಗಾಗಿ ಬಾಲಕನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕ್ಷೀಣಿಸಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೆ ಗ್ರಾಮ ಗಾಂಧಿ ಪುರಸ್ಕಾರ ಪಡೆದುಕೊಂಡಿತ್ತು. ಆದರೆ ಗ್ರಾಮದಲ್ಲಿ ಅಸ್ವಚ್ಚತೆ, ತಿಪ್ಪೆಗುಂಡಿಗಳು ಸಂಗ್ರಹವಾಗಿ ಸೊಳ್ಳೆ ಹರಡಲು ಕಾರಣವಾಗಿದೆ ಎಂದು ಸ್ಥಳಿಯರು ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

- ಶ್ರೀನಿವಾಸ್ ಎಂ ಜೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT