ಶ್ರೀ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿದ ಸಿಎಂ 
ರಾಜ್ಯ

ನೀರು ಹಂಚಿಕೆ: ಮಹಾರಾಷ್ಟ್ರ ಸರ್ಕಾರದೊಂದಿದೆ ಸಿಎಂ ಯಡಿಯೂರಪ್ಪ ಚರ್ಚೆ

ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ. 

ಕಲಬುರಗಿ: ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರು ಮಹಾರಾಷ್ಟ್ರ ಗಡಿ ಪ್ರದೇಶಗಳಿಗೆ ತೆರಳಿದ್ದರು. ಪ್ರಚಾರ ಪೂರ್ಣಗೊಂಡ ಬಳಿಕ ಅಫ್ಜಲ್ಪುರ ತಾಲೂಕಿನ ದೇವಳ್ ಗನಗಾಪುರದಲ್ಲಿರುವ ಶ್ರೀ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಏಳಿಗೆಗಾಗಿ ಹಾಗೂ ಪ್ರವಾಹ ಪೀಡಿತ ಜನರಿಗೆ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ 5 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು ಹೇಳಿದರು. 

ಇದೇ ವೇಳೆ ನೆರೆ ಪರಿಹಾರ ಕಾರ್ಯವನ್ನು ನಿರ್ಲಕ್ಷಿಸುತ್ತಿರುವುದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

ಬಳಿಕ ರಾಜ್ಯ ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಕುಸಿದು ಬೀಳಲಿದೆ ಎಂಬ ವಿರೋಧ ಪಕ್ಷಗಳ ಭವಿಷ್ಯವನ್ನು ಅಲ್ಲಗೆಳೆದ ಅವರು, ನಮ್ಮ ಸರ್ಕಾರ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದಿದ್ದಾರೆ. 

ಮಹಾರಾಷ್ಟ್ರದೊಂದಿಗೆ ಸಂಧಾನ ಮಾಡಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಬೇಸಿಗೆಯಲ್ಲಿ ಎದುರಾಗುವ ನೀರಿನ ಬೇಗೆ ನೀಗಿಸಲು ಕೃಷ್ಣ ಮತ್ತು ಭೀಮಾ ನದಿಗಳಿಗೆ 4 ಟಿಎಂಸಿ ನೀರನ್ನು ಒದಗಿಸಬೇಕಾಗಿದೆ ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಯಡಿಯೂರಿಗೆ ಭೇಟಿ ನೀಡಲಿದ್ದು, ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT