ರಾಜ್ಯ

ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ನಿಧನ: ಗಣ್ಯರ ಸಂತಾಪ

Srinivasamurthy VN

ಬೆಂಗಳೂರು: ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಶುಕ್ರವಾರ ಬೆಳಗ್ಗಿನ ಜಾವ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಶಿವಮೊಗ್ಗದ ಹೆಬ್ಬೂರು ಹೋಬಳಿಯ ಸುಗ್ಗನಹಳ್ಳಿ-ಕೆಂಕೆರೆ ಬಳಿಯ ತಮ್ಮ ತೋಟಕ್ಕೆ ಕಾರಿನಲ್ಲಿ ಹೋಗುವಾಗ ಅಪಘಾತವಾಗಿತ್ತು. ಈ ದುರ್ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಿದ್ದಯ್ಯ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ತಕ್ಷಣ ತುಮಕೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದಯ್ಯ ಅವರ ಆರೋಗ್ಯ ವಿಚಾರಿಸಿದ್ದರು. ಸಿದ್ದಯ್ಯ ಮತ್ತು ಸಿದ್ದರಾಮಯ್ಯ ಅವರಿಗೆ ಹಲವು ವರ್ಷಗಳ ಆತ್ಮೀಯತೆ ಇತ್ತು.

ಮಧ್ಯಾಹ್ನ ತುಮಕೂರಿಗೆ ಪಾರ್ಥಿವ ಶರೀರವನ್ನು ತರಲಾಗುವುದು. ಟೌನ್ ಹಾಲ್ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗುವುದು‌. ಸಂಜೆ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಸಿದ್ದಯ್ಯ ಅವರ ಆಪ್ತರು ತಿಳಿಸಿದ್ದಾರೆ.

SCROLL FOR NEXT