ಸಂಗ್ರಹ ಚಿತ್ರ 
ರಾಜ್ಯ

ಪೊಲೀಸರಿಗೆ ದೀಪಾವಳಿ ಬಂಪರ್; ಔರಾದ್ಕರ್ ವರದಿ ಜಾರಿಗೆ ಬಿಎಸ್ ವೈ ಸರ್ಕಾರ ಆದೇಶ

ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

ಬೆಂಗಳೂರು: ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

2016 ರ ಜೂನ್​ 21ರಂದು ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ, ಆಗಸ್ಟ್​ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಕಾಯುವಂತೆ ಎಡಿಜಿಪಿ ಸೂಚಿಸಿದ್ದರು.

ಸದ್ಯ ವರದಿ ಶಿಫಾರಸ್ಸಿನಂತೆ ವೇತನವನ್ನು ಉನ್ನತೀಕರಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ಆದೇಶ 2019ರ ಆಗಸ್ಟ್​ 1 ರಿಂದಲೇ ಜಾರಿಯಾಗಿದೆ.

2016 ರ ಜೂನ್​ 21ರಂದು ಅಂದುಎಡಿಜಿಪಿಯಾಗಿದ್ದ ರಾಘವೇಂದ್ರ ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ,ಆಗಸ್ಟ್​ 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಗೆ ಆದೇಶ ಹೊರಡಿಸಿತ್ತು.ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಆದೇಶಕ್ಕೆ ತಡೆ ಹಿಡಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT