ರಾಜ್ಯ

ಪೊಲೀಸರಿಗೆ ದೀಪಾವಳಿ ಬಂಪರ್; ಔರಾದ್ಕರ್ ವರದಿ ಜಾರಿಗೆ ಬಿಎಸ್ ವೈ ಸರ್ಕಾರ ಆದೇಶ

Srinivasamurthy VN

ಬೆಂಗಳೂರು: ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

2016 ರ ಜೂನ್​ 21ರಂದು ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ, ಆಗಸ್ಟ್​ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಕಾಯುವಂತೆ ಎಡಿಜಿಪಿ ಸೂಚಿಸಿದ್ದರು.

ಸದ್ಯ ವರದಿ ಶಿಫಾರಸ್ಸಿನಂತೆ ವೇತನವನ್ನು ಉನ್ನತೀಕರಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ಆದೇಶ 2019ರ ಆಗಸ್ಟ್​ 1 ರಿಂದಲೇ ಜಾರಿಯಾಗಿದೆ.

2016 ರ ಜೂನ್​ 21ರಂದು ಅಂದುಎಡಿಜಿಪಿಯಾಗಿದ್ದ ರಾಘವೇಂದ್ರ ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ,ಆಗಸ್ಟ್​ 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಗೆ ಆದೇಶ ಹೊರಡಿಸಿತ್ತು.ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಆದೇಶಕ್ಕೆ ತಡೆ ಹಿಡಿದಿದ್ದರು.

SCROLL FOR NEXT