ಸಂಗ್ರಹ ಚಿತ್ರ 
ರಾಜ್ಯ

ನ.1ರಿಂದ ನಾಮಫಲಕ ಕಡ್ಡಾಯ: ನಿಯಮ ಪಾಲಿಸದವರ ಪರವಾನಗಿ ರದ್ದು- ಬಿಬಿಎಂಪಿ ಆದೇಶ

ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಉದ್ದಮೆ, ಮಾಲ್, ಹೋಟೆಲ್ ಹಾಗೂ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ನ.1ರ ಕನ್ನಡ ರಾಜ್ಯೋತ್ಸವದ ಒಳಗಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಪಲಕ ಪ್ರದರ್ಶನ ಕಡ್ಡಾಯಗೊಳಿಸಬೇಕೆಂದು ಬಿಬಿಎಂಪಿ ಆದೇಶಿಸಿದೆ. 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಉದ್ದಮೆ, ಮಾಲ್, ಹೋಟೆಲ್ ಹಾಗೂ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ನ.1ರ ಕನ್ನಡ ರಾಜ್ಯೋತ್ಸವದ ಒಳಗಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಪಲಕ ಪ್ರದರ್ಶನ ಕಡ್ಡಾಯಗೊಳಿಸಬೇಕೆಂದು ಬಿಬಿಎಂಪಿ ಆದೇಶಿಸಿದೆ. 

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯ ಸೂಚನೆ ಮೇರೆಗೆ ಬಿಬಿಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಆದೇಶವನ್ನು ಹೊರಡಿಸಿದ್ದು, ಬಿಬಿಎಂಪಿಯ ಆರೋಗ್ಯ ವಿಭಾಗದಿಂದ ಉದ್ದಿಮೆ ಪರವಾನಗಿ ಪಡೆಯುವ ಅಂಗಡಿ ಮುಂಗಟ್ಟು, ಹೋಟೆಲ್, ಕಂಪನಿ ಹಾಗೂ ಇತರೆ ಪರವಾನಗಿ ಪಡೆದಿರುವ ವ್ಯಾಪಾರಿಗಳು ತಮ್ಮ ಶಾಖೆಯ ಮುಂದೆ ಅಳವಡಿಸಲಾಗಿರುವ ಮತ್ತು ಅಳವಡಿಸುವ ನಾಮಫಲಕದಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡಬೇಕು. 

ಅಂಗಡಿಗಳಲ್ಲಿ ಅಳವಡಿಸುವ ನಾಮಫಲಕದಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮತ್ತು ದಪ್ಪ ಅಕ್ಷರದಲ್ಲಿ ಬಳಸಬೇಕು. ಒಂದು ವೇಳೆ ಕನ್ನಡ ಭಾಷೆ ಬಳಕೆ ಮಾಡದಿರುವುದು ಕಂಡು ಬಂದಿದ್ದೇ ಆದರೆ, ಉದ್ದಿಮೆ ಪರವಾನಗಿಯನ್ನು ರದ್ದು ಪಡಿಸಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT