ಸಂಗ್ರಹ ಚಿತ್ರ 
ರಾಜ್ಯ

ನ.1ರಿಂದ ನಾಮಫಲಕ ಕಡ್ಡಾಯ: ನಿಯಮ ಪಾಲಿಸದವರ ಪರವಾನಗಿ ರದ್ದು- ಬಿಬಿಎಂಪಿ ಆದೇಶ

ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಉದ್ದಮೆ, ಮಾಲ್, ಹೋಟೆಲ್ ಹಾಗೂ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ನ.1ರ ಕನ್ನಡ ರಾಜ್ಯೋತ್ಸವದ ಒಳಗಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಪಲಕ ಪ್ರದರ್ಶನ ಕಡ್ಡಾಯಗೊಳಿಸಬೇಕೆಂದು ಬಿಬಿಎಂಪಿ ಆದೇಶಿಸಿದೆ. 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಉದ್ದಮೆ, ಮಾಲ್, ಹೋಟೆಲ್ ಹಾಗೂ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ನ.1ರ ಕನ್ನಡ ರಾಜ್ಯೋತ್ಸವದ ಒಳಗಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಪಲಕ ಪ್ರದರ್ಶನ ಕಡ್ಡಾಯಗೊಳಿಸಬೇಕೆಂದು ಬಿಬಿಎಂಪಿ ಆದೇಶಿಸಿದೆ. 

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯ ಸೂಚನೆ ಮೇರೆಗೆ ಬಿಬಿಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಆದೇಶವನ್ನು ಹೊರಡಿಸಿದ್ದು, ಬಿಬಿಎಂಪಿಯ ಆರೋಗ್ಯ ವಿಭಾಗದಿಂದ ಉದ್ದಿಮೆ ಪರವಾನಗಿ ಪಡೆಯುವ ಅಂಗಡಿ ಮುಂಗಟ್ಟು, ಹೋಟೆಲ್, ಕಂಪನಿ ಹಾಗೂ ಇತರೆ ಪರವಾನಗಿ ಪಡೆದಿರುವ ವ್ಯಾಪಾರಿಗಳು ತಮ್ಮ ಶಾಖೆಯ ಮುಂದೆ ಅಳವಡಿಸಲಾಗಿರುವ ಮತ್ತು ಅಳವಡಿಸುವ ನಾಮಫಲಕದಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡಬೇಕು. 

ಅಂಗಡಿಗಳಲ್ಲಿ ಅಳವಡಿಸುವ ನಾಮಫಲಕದಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮತ್ತು ದಪ್ಪ ಅಕ್ಷರದಲ್ಲಿ ಬಳಸಬೇಕು. ಒಂದು ವೇಳೆ ಕನ್ನಡ ಭಾಷೆ ಬಳಕೆ ಮಾಡದಿರುವುದು ಕಂಡು ಬಂದಿದ್ದೇ ಆದರೆ, ಉದ್ದಿಮೆ ಪರವಾನಗಿಯನ್ನು ರದ್ದು ಪಡಿಸಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT