ಗಂಗಾವತಿ ತಾಲ್ಲೂಕಿನ ವಿರುಪಾಪುರಗಡ್ಡೆಯಿಂದ ವಿದೇಶಿಗರನ್ನು ಹೊರಕ್ಕೆ ಕಳಿಸಲಾಯಿತು. 
ರಾಜ್ಯ

ಗಂಗಾವತಿ: ನದಿಗೆ ಅಪಾರ ನೀರು, ಆನೆಗೊಂದಿ ಸುತ್ತಲೂ ಹೈ ಅಲರ್ಟ್!

ತುಂಗಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಪರಿಣಾಮ ನದಿಪಾತ್ರದಲ್ಲಿರುವ ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 

ಗಂಗಾವತಿ: ತುಂಗಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಪರಿಣಾಮ ನದಿಪಾತ್ರದಲ್ಲಿರುವ ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 

ಈಗಾಗಲೆ ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವಾದ ವಿರುಪಾಪುರಗಡ್ಡೆಯ ಸುತ್ತಲೂ ಜಲಾವೃತವಾಗಿದ್ದು ನಡುಗಡೆಯಾಗಿದೆ. ಪ್ರವಾಸಿ ಧಾರ್ಮಿಕ ಕ್ಷೇತ್ರಗಳಾದ ಖಷಿಮುಖ ಪರ್ವತ, ನವವೃಂದಾವನ ಗಡ್ಡೆಗೆ ಸಂಪರ್ಕ ಕಡೆದುಕೊಂಡಿದೆ. 

ಕೃಷ್ಣದೇವರಾಯನ ಸಮಾಧಿ ಸಂಪೂರ್ಣ ಜಲಾವೃತವಾಗಿದೆ. ಆನೆಗೊಂದಿ ಭಾಗದಲ್ಲಿ ರೆಡ್ ಅಲಾರ್ಟ್ ಘೋಷಣೆಯಾಗಿದ್ದು, ಗ್ರಾಮಸ್ಥರಿಗೆ ಕಂದಾಯ ಇಲಾಖೆ ಹಾಗೂ ಪಂಚಾಯಿತಿಯಿಂದ ಡಂಗೂರ ಹಾಕಿಸಿ ಎಚ್ಚರಿಕೆ ನೀಡಲಾಗುತ್ತಿದೆ. 

ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ತೊಳೆಯಲು, ಸ್ನಾನ ಅಥವಾ ಕೃಷಿ ಚಟುವಟಿಕೆ ಕೈಗೊಳ್ಳಲು ನದಿಪಾತ್ರಕ್ಕೆ ಹೋಗದಂತೆ ಜನರಿಗೆ ಗ್ರಾಮ ಪಂಚಾಯಿತಿಯಿಂದ ಎಚ್ಚರಿಕೆ ರವಾನಿಸಲಾಗಿದೆ. ಈಗಾಗಲೆ ಆನೆಗೊಂದಿ, ಚಿಕ್ಕ ಜಂತಕಲ್, ಸಿಂಗನಗುಂಡು, ವಿಪ್ರ, ಭಾಗದಲ್ಲಿನ ಬಾಳೆಗಿಡಗಳು ನೀರಿನಲ್ಲಿ ಮುಳುಗಿವೆ. ಅಯೋಧ್ಯೆ, ಢಣಾಪುರ, ಮುಷ್ಟೂರು, ಡಗ್ಗಿ, ಬರಗೂರು, ಕುಂಟೋಜಿ, ಕಕ್ಕರಗೋಳ ಮೊದಲಾದ ಗ್ರಾಮಗಳಲ್ಲಿ ಈಗಾಗಲೆ ಪ್ರವಾಹದ ಭೀತಿ ಎದುರಾಗಿದೆ. 

ಈಗಾಗಲೆ ನದಿಗೆ 90 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಕಂಪ್ಲಿಯ ಸೇತುವೆ ಮುಳುಗಡೆಗೆ ಕೇವಲ ನಾಲ್ಕು ಅಡಿ ಮಾತ್ರ ಬಾಕಿಯಿದೆ. ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರು ಹರಿಸಿದಲ್ಲಿ ಸೇತುವೆ ಮುಳುಗಡೆಯಾಗಲಿದೆ. ಇದರಿಂದ ಗಂಗಾವತಿ ಮತ್ತು ಕಂಪ್ಲಿ ಮಧ್ಯೆದ ನೇರ ರಸ್ತೆ ಸಂಪರ್ಕ ಸ್ಥಗಿತವಾಗಲಿದೆ. ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಸಂಪರ್ಕಕ್ಕೆ ಸುತ್ತುಬಳಿಸಿ ಹೊಸಪೇಟೆ ಇಲ್ಲವೇ ಸಿರುಗುಪ್ಪಾದ ಮೂಲಕ ರಸ್ತೆ ಸಂಪರ್ಕ ಸಾಧಿಸುವ ಅನಿವಾರ್ಯತೆ ಎದುರಾಗಲಿದೆ. 

ಈಗಾಗಲೆ ಕಳೆದ ಎರೆಡು ತಿಂಗಳಲ್ಲಿ ಮೂರು ಬಾರಿ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಈಗಾಗಲೆ ಶಿಥಿಲಾವಸ್ಥೆಯಲ್ಲಿರುವ ಸೇತುವೆ ಮೇಲಿನ ಸಂಚಾರ ಅಪಾಯಕಾರಿಯಾಗಿದ್ದು, ಭಾರಿ ವಾಹನಗಳು ಸಂಚರಿಸಿದ್ದಲ್ಲಿ ಯಾವುದೇ ಸಂದರ್ಭದಲ್ಲಿ ಅಪಾಯ ಸಂಭವಿಸುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT