ಸಂಗ್ರಹ ಚಿತ್ರ 
ರಾಜ್ಯ

18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ: ರಾಜ್ಯ ಸರ್ಕಾರ ಘೋಷಣೆ

2019ರ ಮುಂಗಾರು ಋತುವಿನಲ್ಲಿ ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. 

ಬೆಂಗಳೂರು:  2019ರ ಮುಂಗಾರು ಋತುವಿನಲ್ಲಿ ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಬರ ಪರಿಸ್ಥಿತಿ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದರು.

ಯಾವ ಜಿಲ್ಲೆಯ ಯಾವ ತಾಲೂಕು ಬರಪೀಡಿತ:
ಬೆಂ.ನಗರ ಜಿಲ್ಲೆ- ಆನೇಕಲ್, ಬೆಂ.ಉತ್ತರ ಹಾಗು ಬೆಂ.ಪೂರ್ವ ತಾಲೂಕು 
ಬೆಂ.ಗ್ರಾಮಾಂತರ- ದೇವನಹಳ್ಳಿ, ಹೊಸಕೋಟೆ, ನೆಲಮಂಗಲ
ರಾಮನಗರ- ಕನಕಪುರ, ರಾಮನಗರ
ಕೋಲಾರ- ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ
ಚಿಕ್ಕಬಳ್ಳಾಪುರ- ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ
ತುಮಕೂರು- ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು, ತುರುವೇಕೆರೆ
ಚಿತ್ರದುರ್ಗ- ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು
ದಾವಣಗೆರೆ- ಜಗಳೂರು
ಚಾಮರಾಜನಗರ- ಕೊಳ್ಳೆಗಾಲ
ಬಳ್ಳಾರಿ- ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರಗುಪ್ಪ
ಕೊಪ್ಪಳ- ಗಂಗಾವತಿ
ರಾಯಚೂರು- ಮಾನ್ವಿ, ರಾಯಚೂರು, ಸಿಂಧನೂರು
ಕಲಬುರಗಿ- ಚಿಂಚೋಳಿ, ಜೇವರ್ಗಿ, ಸೇಡಂ
ಯಾದಗಿರಿ- ಯಾದಗಿರಿ
ಬೆಳಗಾವಿ- ಅಥಣಿ
ಬಾಗಲಕೋಟೆ- ಬಾದಾಮಿ, ಬಿಳಗಿ, ಜಮಖಂಡಿ
ವಿಜಯಪುರ- ಬಸವನಬಾಗೇವಾಡಿ, ವಿಜಯಪುರ, ಇಂಡಿ, ಸಿಂಧಗಿ
ಗದಗ- ನರಗುಂದ

ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ಜಮೀನು ವಶಕ್ಕೆ:

ಬೆಂಗಳೂರಿನ ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ಮೂಲ ಒಪ್ಪಂದ ಉಲ್ಲಂಘಿಸಿ ಪೆಟ್ರೋಲ್ ಬಂಕ್ ಗೆ  150/100 ವಿಸ್ತೀರ್ಣದ ಜಮೀನ್ನು ಉಪ ಗುತ್ತಿಗೆ ನೀಡಿದೆ. ಉಪ ಗುತ್ತಿಗೆ ನೀಡಿ ಕೋಟ್ಯಂತರ ರೂ ಹಣವನ್ನು ಪಡೆದಿದೆ. ಇದೀಗ ಆಡಿಟ್ ವರದಿಯಂತೆ ಸುಮಾರು 3.14 ಕೋಟಿ ರೂ ಹಣವನ್ನು ಕ್ಲಬ್ ಸರ್ಕಾರಕ್ಕೆ ಕೊಡಬೇಕಾಗಿದೆ‌. ಜತೆಗೆ ಆ ಜಮೀನನ್ನು ಅವರಿಂದ ವಾಪಸು ಪಡೆಯಲು ನಿರ್ಧರಿಸಿದ್ದೇವೆ. ಅದನ್ನು ಪಾಲಿಕೆಗೆ ವರ್ಗಾಯಿಸಿ, ಸಾರ್ವಜನಿಕ ಉದ್ದೇಶಗಳಿಗೆ ಬಳಸಲಾಗುವುದು ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT