ಸಂಗ್ರಹ ಚಿತ್ರ 
ರಾಜ್ಯ

18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ: ರಾಜ್ಯ ಸರ್ಕಾರ ಘೋಷಣೆ

2019ರ ಮುಂಗಾರು ಋತುವಿನಲ್ಲಿ ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. 

ಬೆಂಗಳೂರು:  2019ರ ಮುಂಗಾರು ಋತುವಿನಲ್ಲಿ ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಬರ ಪರಿಸ್ಥಿತಿ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದರು.

ಯಾವ ಜಿಲ್ಲೆಯ ಯಾವ ತಾಲೂಕು ಬರಪೀಡಿತ:
ಬೆಂ.ನಗರ ಜಿಲ್ಲೆ- ಆನೇಕಲ್, ಬೆಂ.ಉತ್ತರ ಹಾಗು ಬೆಂ.ಪೂರ್ವ ತಾಲೂಕು 
ಬೆಂ.ಗ್ರಾಮಾಂತರ- ದೇವನಹಳ್ಳಿ, ಹೊಸಕೋಟೆ, ನೆಲಮಂಗಲ
ರಾಮನಗರ- ಕನಕಪುರ, ರಾಮನಗರ
ಕೋಲಾರ- ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ
ಚಿಕ್ಕಬಳ್ಳಾಪುರ- ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ
ತುಮಕೂರು- ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು, ತುರುವೇಕೆರೆ
ಚಿತ್ರದುರ್ಗ- ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು
ದಾವಣಗೆರೆ- ಜಗಳೂರು
ಚಾಮರಾಜನಗರ- ಕೊಳ್ಳೆಗಾಲ
ಬಳ್ಳಾರಿ- ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರಗುಪ್ಪ
ಕೊಪ್ಪಳ- ಗಂಗಾವತಿ
ರಾಯಚೂರು- ಮಾನ್ವಿ, ರಾಯಚೂರು, ಸಿಂಧನೂರು
ಕಲಬುರಗಿ- ಚಿಂಚೋಳಿ, ಜೇವರ್ಗಿ, ಸೇಡಂ
ಯಾದಗಿರಿ- ಯಾದಗಿರಿ
ಬೆಳಗಾವಿ- ಅಥಣಿ
ಬಾಗಲಕೋಟೆ- ಬಾದಾಮಿ, ಬಿಳಗಿ, ಜಮಖಂಡಿ
ವಿಜಯಪುರ- ಬಸವನಬಾಗೇವಾಡಿ, ವಿಜಯಪುರ, ಇಂಡಿ, ಸಿಂಧಗಿ
ಗದಗ- ನರಗುಂದ

ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ಜಮೀನು ವಶಕ್ಕೆ:

ಬೆಂಗಳೂರಿನ ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ಮೂಲ ಒಪ್ಪಂದ ಉಲ್ಲಂಘಿಸಿ ಪೆಟ್ರೋಲ್ ಬಂಕ್ ಗೆ  150/100 ವಿಸ್ತೀರ್ಣದ ಜಮೀನ್ನು ಉಪ ಗುತ್ತಿಗೆ ನೀಡಿದೆ. ಉಪ ಗುತ್ತಿಗೆ ನೀಡಿ ಕೋಟ್ಯಂತರ ರೂ ಹಣವನ್ನು ಪಡೆದಿದೆ. ಇದೀಗ ಆಡಿಟ್ ವರದಿಯಂತೆ ಸುಮಾರು 3.14 ಕೋಟಿ ರೂ ಹಣವನ್ನು ಕ್ಲಬ್ ಸರ್ಕಾರಕ್ಕೆ ಕೊಡಬೇಕಾಗಿದೆ‌. ಜತೆಗೆ ಆ ಜಮೀನನ್ನು ಅವರಿಂದ ವಾಪಸು ಪಡೆಯಲು ನಿರ್ಧರಿಸಿದ್ದೇವೆ. ಅದನ್ನು ಪಾಲಿಕೆಗೆ ವರ್ಗಾಯಿಸಿ, ಸಾರ್ವಜನಿಕ ಉದ್ದೇಶಗಳಿಗೆ ಬಳಸಲಾಗುವುದು ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT