ಸಾಂದರ್ಭಿಕ ಚಿತ್ರ 
ರಾಜ್ಯ

ಡೆಲಿವರಿ ಬಾಯ್ಸ್ ಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯ- ಎಸ್. ಸುರೇಶ್ ಕುಮಾರ್ 

ಡೆಲಿವರಿ ಬಾಯ್ಸ್ ಹಾಗೂ ಮೊಬೈಲ್ ಆಪ್  ಆಧಾರಿತ ಕೆಲಸ ಮಾಡುವ ಚಾಲಕರಿಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್  ತಿಳಿಸಿದ್ದಾರೆ.

ಬೆಂಗಳೂರು: ಡೆಲಿವರಿ ಬಾಯ್ಸ್ ಹಾಗೂ ಮೊಬೈಲ್ ಆಪ್  ಆಧಾರಿತ ಕೆಲಸ ಮಾಡುವ ಚಾಲಕರಿಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್  ತಿಳಿಸಿದ್ದಾರೆ.

ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಡೆಲಿಬಾಯ್ಸ್ ಹಾಗೂ  ಚಾಲಕರಿಗೆ ಸಾಮಾಜಿಕ ಸೇವ ಒದಗಿಸುವ ಸಂಬಂಧ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ಸ್ಥಾಪಿಸಲಾಗುವುದು, ಆ ವರದಿ ಆಧಾರದ ಮೇಲೆ ಕರಡು ನೀತಿಯೊಂದನ್ನು ರೂಪಿಸಲಾಗುವುದು ಎಂದು ಹೇಳಿದರು.

ಮೊಬೈಲ್ ಆಪ್ ಆಧಾರಿತ ಸೇವೆ ನೀಡುವ ಟ್ಯಾಕ್ಸಿ ಚಾಲಕರ ಬಗ್ಗೆಯೂ ಗಮನಹರಿಸಲಾಗಿದೆ. ಈ ಸಂಬಂಧ ಕಂಪನಿಗಳು ಹಾಗೂ ಮಾಲೀಕರೊಂದಿಗೆ ಶೀಘ್ರದಲ್ಲಿಯೇ  ಸಭೆ ನಡೆಸಲಾಗುವುದು ಎಂದರು.

ಆಡಳಿತ ಮಂಡಳಿ ಹಾಗೂ ನೌಕರರ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ನೀತಿಯೊಂದರ ಅಗತ್ಯವಿದೆ. ಇದರಿಂದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗಲಿದೆ.  ಕಟ್ಟಡ ನಿರ್ಮಾಣದ ಕಾರ್ಮಿಕರಿಗಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ  ಸಹಾಯವಾಣಿ 155214 ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT