ರಾಜ್ಯ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

Shilpa D

ನವದೆಹಲಿ: ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಸ್ಪೀಕರ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಮಂಗಳವಾರ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತ್ತು. ಮಂಗಳವಾರಕ್ಕೆ ಬದಲಾಗಿ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಳ್ಳುವಂತೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಸೋಮವಾರ ನ್ಯಾಯಾಲಯಕ್ಕೆ ಮೌಖಿಕ ಮನವಿ ಮಾಡಿಕೊಂಡಿದ್ದರು.

ಮನವಿಯನ್ನು ಪುರಸ್ಕರಿಸಿರುವ ಎನ್.ವಿ.ರಮಣ ನೇತೃತ್ವದ ಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

SCROLL FOR NEXT