ರೈಲಿಗೆ ಚಾಲನೆ ನೀಡುತ್ತಿರುವ ಸಚಿವರು 
ರಾಜ್ಯ

ವಿಜಯಪುರ- ಯಶವಂತಪುರ ನಡುವೆ ನೇರ ರೈಲಿಗೆ ಸಚಿವ ಸುರೇಶ್ ಅಂಗಡಿ ಹಸಿರು ನಿಶಾನೆ

ವಿಜಯಪುರದಿಂದ ಬೆಂಗಳೂರಿನ ಯಶವಂತಪುರ ನಡುವೆ ನೇರ ರೈಲು ಸೇವೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಸಿ ಅಂಗಡಿ ಅವರು ಹಸಿರು ನಿಶಾನೆ ತೋರಿದರು.

ವಿಜಯಪುರ: ವಿಜಯಪುರದಿಂದ ಬೆಂಗಳೂರಿನ ಯಶವಂತಪುರ ನಡುವೆ ನೇರ ರೈಲು ಸೇವೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಸಿ ಅಂಗಡಿ ಅವರು ಹಸಿರು ನಿಶಾನೆ ತೋರಿದರು.

ಸಚಿವರು ಆರಂಭಿಕ ವಿಶೇಷ ರೈಲು ಸಂಖ್ಯೆ 06542 ವಿಜಯಪುರ- ಯಶವಂತಪುರ ಎಕ್ಸ್‌ಪ್ರೆಸ್‍ಗೆ ನಿನ್ನೆ ವಿಜಯಪುರ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

ವಿಜಯಪುರದಿಂದ ಬೆಂಗಳೂರು -ಯಶವಂತಪುರ ನೇರ ರೈಲು ಸಂಚಾರದಿಂದ ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‍ ಕುಮಾರ್ ಸಿಂಗ್ ತಮ್ಮ ಸ್ವಾಗತ ಭಾಷಣದಲ್ಲಿ ಹೇಳಿದ್ದಾರೆ.

ಈ ರೈಲು ಕರ್ನಾಟಕದ 11 ಜಿಲ್ಲೆಗಳ ಪ್ರಮುಖ ಭಾಗಗಳನ್ನು ಸಂಪರ್ಕಿಸುತ್ತದೆ. ಈ ಪ್ರದೇಶದ ಹೆಚ್ಚಿನ ಜನರು ಬೆಂಗಳೂರಿನಲ್ಲಿ ಕೆಲಸ ಇಲ್ಲವೇ ಅಧ್ಯಯನ ಮಾಡುತ್ತಿರುವುದರಿಂದ ಈ ರೈಲು ಅವರಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದು ಕರ್ನಾಟಕದ ಬಹುತೇಕ ಭಾಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ ಪ್ರದೇಶದ ವ್ಯಾಪಾರ ಮತ್ತು ವಾಣಿಜ್ಯವನ್ನು ಹೆಚ್ಚಿಸುತ್ತದೆ. ಅಲ್ಲದೆ, ಪ್ರವಾಸಿ ಆಸಕ್ತಿಯ ಸ್ಥಳಗಳು ಮತ್ತು ಪಾರಂಪರಿಕ ತಾಣಗಳಾದ ಹೊಸಪೇಟೆ (ಹಂಪಿ), ಬಾದಾಮಿ ಮತ್ತು ವಿಜಯಪುರ ಇತ್ಯಾದಿ ಸ್ಥಳಗಳಿಗೆ ಸಂಪರ್ಕ ಒದಗಿಸುವುದರಿಂದ ಪ್ರವಾಸೋದ್ಯಮವೂ ಅಭಿವೃದ್ಧಿಯಾಗಲಿದೆ ಎಂದರು.

ವಿಜಯಪುರ ಜಿಲ್ಲೆಯ ಜನರಿಗೆ ಹಬ್ಬದ ಉಡುಗೊರೆಯಾಗಿ ದೀಪಾವಳಿಯ ಮೊದಲು ಹೊಸ ರೈಲು ಸೇವೆ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT