ಜಮಖಂಡಿಯಲ್ಲಿ ಗೋ ಮಾತೆಗೆ ಸೀಮಂತ ನೆರವೇರಿಸಿದ ಜಕಾತಿ ಕುಟುಂಬ 
ರಾಜ್ಯ

ಜಮಖಂಡಿಯಲ್ಲಿ ಗೋ ಮಾತೆಗೆ ಸೀಮಂತ!

ದೇಶದಲ್ಲಿ ಗೋಹತ್ಯೆ ವ್ಯಾಪಕವಾಗುತ್ತಿರುವ ಸನ್ನಿವೇಶದಲ್ಲಿ ಜಮಖಂಡಿಯ ಟೀಚರ್ಸ್ ಕಾಲೋನಿಯಲ್ಲಿ ಅಪರೂಪ ಎನ್ನುವಂತೆ ಗೋಮಾತೆಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ನಡೆದಿದೆ.

ಬಾಗಲಕೋಟೆ: ದೇಶದಲ್ಲಿ ಗೋಹತ್ಯೆ ವ್ಯಾಪಕವಾಗುತ್ತಿರುವ ಸನ್ನಿವೇಶದಲ್ಲಿ ಜಮಖಂಡಿಯ ಟೀಚರ್ಸ್ ಕಾಲೋನಿಯಲ್ಲಿ ಅಪರೂಪ ಎನ್ನುವಂತೆ ಗೋಮಾತೆಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ನಡೆದಿದೆ.

ಭಾರತೀಯ ಸಂಪ್ರದಾಯದಲ್ಲಿ ಮಹಿಳೆ ಚೊಚ್ಚಲ ಬಸೂರಿ ಆಗಿದ್ದ ವೇಳೆ ತವರು ಮನೆಯವರು ಮತ್ತು ಗಂಡನ ಮನೆಯವರು ಹಾಗೂ ಬಂಧು ಬಳಗ ಸೇರಿ ಸೀಮತ ಕಾರ್ಯಕ್ರಮ ನಡೆಸುವುದು ವಾಡಿಕೆ. 

ಪುರಾಣ, ಇತಿಹಾಸ ಕಾಲದಿಂದಲೂ ಭಾರತೀಯರಲ್ಲಿ ಗೋಮಾತೆಗೆ ಪೂಜ್ಯನೀಯ ಸ್ಥಾನವಿದೆ. ಗೋಮಾತೆಯಲ್ಲಿ 33 ಸಾವಿರ ದೇವತೆಗಳ ವಾಸಿಸುತ್ತಿದ್ದಾರೆ ಎನ್ನುವ ಬಲವಾದ ನಂಬಿಕೆ ಭಾರತೀಯರದ್ದಾಗಿದೆ. ಹಾಗೆ ಗೋವಿನ ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಜಮಖಂಡಿಯ ಟೀಚರ್ಸ್ ಕಾಲೋನಿಯ ಜಕಾತಿ ಕುಟುಂಬ ಸಂಭ್ರಮದ ಸೀಮಂತ ಕಾರಣ ಮಾಡಿ ಸಂಭ್ರಮಿಸಿದೆ.

ಜಮಖಂಡಿಯ ಶೋಭಾ ಜಕಾತಿ ಅವರು ತಮ್ಮ ಮನೆಯಲ್ಲಿ ಗೋವು ಸಾಕಿದ್ದಾರೆ. ಗೋವನ್ನು ಸಾಕಿದಾಗಿನಿಂದಲೂ ತಮ್ಮ ಮನೆಗೆ ಒಳ್ಳೆಯದಾಗಿದೆ ಎನ್ನುವ ನಂಬಿಕೆ. ಆ ನಂಬಿಕೆ ಹಿನ್ನೆಲೆಯಲ್ಲಿಯೇ ಸಾಕಿದ ಗೋಮಾತೆ ಮೊದಲ ಬಾರಿಗೆ ಗರ್ಭ ಧರಿಸಿದ್ದರಿಂದ ಸಂತಸಗೊಂಡು, ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯೊಬ್ಬರಿಗೆ ಹೇಗೆ ಸೀಮಂತ ಮಾಡುತ್ತಾರೋ ಹಾಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡು, ಕಾರ್ಯಕ್ರಮದ ಕಾರ್ಡ್‍ಗಳನ್ನು ಪ್ರಿಂಟ್ ಹಾಕಿಸಿ ಬಂಧು ಬಳಗ ಹಾಗೂ ನೆರೆಹೊರೆಯವರನ್ನು ಸೇರಿಸಿ ಸೀರೆ ಉಡಿಸಿ, ಆರತಿ ಎತ್ತಿ, ಶೋಭಾನೆ ಪದ ಹಾಡುವ ಮೂಲಕ ಗೋಮಾತೆಗೆ ಸೀಮಂತ ಮಾಡಿದ್ದಾರೆ. ಆಗಮಿಸಿದ ಎಲ್ಲರಿಗೂ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ಜಕಾತಿ ಕುಟುಂಬದ ಈ ಅಪರೂಪದ ಕಾರ್ಯಕ್ರಮಕ್ಕೆ ಜನತೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

ದೇಶದಲ್ಲಿಂದು ಗೋವುಗಳ ರಕ್ಷಣೆಗಾಗಿ ಎಷ್ಟೆಲ್ಲ ಹೋರಾಟಗಳು ನಡೆಯುತ್ತಿರುವಾಗ ಇಂತಹ ಮಾದರಿ ಕಾರ್ಯಕ್ರಮ ನಡೆದದ್ದು ಸಾಕಷ್ಟು ಸುದ್ದಿಗೆ ಗ್ರಾಸವಾಗಿದೆ. ಇಂತಹ ಕಾರ್ಯಕ್ರಮಗಳನ್ನು ನೋಡಿಯಾದರೂ ಗೋ ಸಂತತಿ ರಕ್ಷಣೆಗೆ ಮುಂದಾಗಬೇಕಿದೆ. ಇದೊಂದು ಮಾದರಿ ಕಾರ್ಯಕ್ರಮ ಎನ್ನುವ ಹಾರೈಕೆಗೆ ಸೀಮಂತ ಪಾತ್ರವಾಗಿದೆ.

ವರದಿ: ವಿಠ್ಠಲ ಆರ್. ಬಲಕುಂದಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT