ಸಾಂದರ್ಭಿಕ ಚಿತ್ರ 
ರಾಜ್ಯ

ಕಾಲೇಜು ವ್ಯವಸ್ಥಾಪಕ ಕಿರುಕುಳ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ನಗರದ ಅಮೃತ ಎಂಜಿನಿಯರಿಂಗ್ ಕಾಲೇಜಿನ ಏಳನೇ ಮಹಡಿಯಿಂದ ಕೆಳಗೆ ಧುಮುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರು: ನಗರದ ಅಮೃತ ಎಂಜಿನಿಯರಿಂಗ್ ಕಾಲೇಜಿನ ಏಳನೇ ಮಹಡಿಯಿಂದ ಕೆಳಗೆ ಧುಮುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


22 ವರ್ಷದ ಶ್ರೀ ಹರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಾಲೇಜು ವ್ಯವಸ್ಥಾಪಕರಿಂದ ಕಿರುಕುಳ ತಾಳಲಾರದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.


ಹಾಸ್ಟೆಲ್ ನಲ್ಲಿ ನೀರಿಗೆ ತೊಂದರೆಯಿದೆ ಎಂದು ಶ್ರೀಹರ್ಷ ದೂರು ನೀಡಿದ್ದರಂತೆ. ಇದಕ್ಕೆ ಕಾಲೇಜು ಮಂಡಳಿ ಶ್ರೀಹರ್ಷನನ್ನು ಕಾಲೇಜಿನಿಂದ ತೆಗೆದುಹಾಕಿ ಮೊನ್ನೆ ಸೋಮವಾರ ಆತನ ಪೋಷಕರಿಗೆ ಬಂದು ಮಾತನಾಡುವಂತೆ ಸೂಚನೆ ನೀಡಿತ್ತು.
ಶ್ರೀಹರ್ಷನ ತಂದೆ ಆಂಧ್ರ ಪ್ರದೇಶದಿಂದ ಬಂದರೂ ಕೂಡ ಕಾಲೇಜಿನ ಒಳಗೆ ಬಿಟ್ಟಿರಲಿಲ್ಲ. ಈ ವಿಷಯ ತಿಳಿದು ಶ್ರೀಹರ್ಷ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಕೂಡಲೇ ಕಾಲೇಜಿನ ಇತರ ವಿದ್ಯಾರ್ಥಿಗಳು ಶ್ರೀಹರ್ಷನ ಆತ್ಮಹತ್ಯೆಯನ್ನು ಖಂಡಿಸಿ ಕಾಲೇಜು ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಕಾಲೇಜಿನ ಕಿಟಕಿಗಳನ್ನು ಮುರಿದರು. 


ಪರಪ್ಪನ ಅಗ್ರಹಾರ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿ ವ್ಯವಸ್ಥಾಪಕ ಮಂಡಳಿಯನ್ನು ವಿಚಾರಣೆಗೆ ಕರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT