ಕಾರು ಅಪಘಾತ ದೃಶ್ಯ 
ರಾಜ್ಯ

ಮಂಗಳೂರು: ವೇಗವಾಗಿ ಬಂದು ಮಸೀದಿಯೊಳಗೆ ನುಗ್ಗಿದ ಓಮ್ನಿ, ಭಯಾನಕ ವಿಡಿಯೋ ವೈರಲ್!

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿ ಕಾರೊಂದು ವೇಗವಾಗಿ ಬಂದು ಮಸೀದಿಯೊಳಗೆ ನುಗ್ಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಭೀಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಗಳೂರು: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿ ಕಾರೊಂದು ವೇಗವಾಗಿ ಬಂದು ಮಸೀದಿಯೊಳಗೆ ನುಗ್ಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಭೀಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮಾರುತಿ ಓಮ್ನಿ ಕಾರು ಬಿಸಿ ರಸ್ತೆಯಿಂದ ಮಂಗಳೂರಿನ ಕಡೆ ಬರುತ್ತಿದ್ದು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತ್ವಾಜಾ ಜುಮ್ಮಾ ಮಸೀದಿಯ ಒಳಗೆ ಕಾರು ನುಗ್ಗಿ ಗೋಡೆಗೆ ಏರಿ ನಿಂತಿದ್ದು ಈ ಪ್ರಕರಣದಲ್ಲಿ ಐವರು ಗಾಯಗೊಂಡಿದ್ದಾರೆ. 

ಇಸ್ಮಾಯಿಲ್ ಮತ್ತು ಸುಲೈಮಾನ್ ಎಂಬುವವರು ಪ್ರಾರ್ಥನೆ ಮುಗಿಸಿ ಹೊಸ ಬರುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಸೀದಿಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಈ ಭೀಕರ ಅಪಘಾತದ ವಿಡಿಯೋ ಸೆರೆಯಾಗಿದೆ. ಇನ್ನು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT