ಸಾಂದರ್ಭಿಕ ಚಿತ್ರ 
ರಾಜ್ಯ

ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಚಾಮರಾಜನಗರ: ವೃದ್ಧರೊಬ್ಬರು ಕರಡಿ ದಾಳಿಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.

ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಜಮೀನಿನಲ್ಲಿ ಇದ್ದ ವೇಳೆ ವೃದ್ಧ ಮಹದೇವ ಶೆಟ್ಟಿ(70) ಎಂಬುವರು ಕರಡಿ ದಾಳಿಗೆ ಬಲಿಯಾಗಿದ್ದಾರೆ. 
ಓಂಕಾರ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿ ಹೆಚ್ಚಿರುವುದರಿಂದ ಕರಡಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತೆರಕಣಾಂಬಿ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ‌.

ಗಡಿ ಜಿಲ್ಲೆಯಲ್ಲಿ ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹುಲಿ, ಚಿರತೆ, ಆನೆ ಬಳಿಕ ಈಗ ಜನರಿಗೆ ಕರಡಿ ಭೀತಿ ಶುರುವಾಗಿದೆ.

ಕೊಲೆಯೂ ಆಗಿರಬಹುದು
ವ್ಯಕ್ತಿಯ ಮುಖದ ಮೇಲೆ ಮಾತ್ರ ಗಾಯದ ಗುರುತುಗಳಿದ್ದು, ಯರಾದರೂ ಕೊಲೆ ಮಾಡಿ ಬಿಸಾಡಿದ ಬಳಿಕ ಕಾಡುಪ್ರಾಣಿಗಳು ತಿಂದು ಹಾಕಿರುವ ಶಂಕೆಯೂ ವ್ಯಕ್ತವಾಗಿದೆ.

ವರದಿ: ನಂದೀಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT